Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...