Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...