Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...