Homeಮುಖಪುಟಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

- Advertisement -
- Advertisement -

ಸಂತ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಕೆಲವೇ ದಿನಗಳ ನಂತರ 6,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಇತರ ಸಂಸ್ಥೆಗಳಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (ಎಫ್‌ಸಿಆರ್‌ಎ) ರಾತ್ರೋರಾತ್ರಿ ಮುಗಿದಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಶನಿವಾರ ಹೇಳಿದೆ.

6,000 ಕ್ಕೂ ಹೆಚ್ಚು ಎನ್‌ಜಿಒಗಳು ಅಥವಾ ಸಂಸ್ಥೆಗಳು ತಮ್ಮ ಪರವಾನಗಿಗಳನ್ನು ನವೀಕರಿಸಲು ಅರ್ಜಿ ಸಲ್ಲಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ 

“ಗಡುವಿನ ಮೊದಲು ಅರ್ಜಿ ಸಲ್ಲಿಸಲು ಜ್ಞಾಪನೆಗಳನ್ನು ಕಳುಹಿಸಲಾಗಿದೆ. ಆದರೆ ಅನೇಕ ಎನ್‌ಜಿಒಗಳು ಹಾಗೆ ಅರ್ಜಿ ಸಲ್ಲಿಸಿಲ್ಲ. ಹೀಗಾದರೆ ಅನುಮತಿ ನೀಡುವುದು ಹೇಗೆ…ಎಂದು ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ” ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಆಕ್ಸ್‌ಫ್ಯಾಮ್ ಇಂಡಿಯಾ ಟ್ರಸ್ಟ್, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದಂತೆ, ಕಳೆದ ಕೆಲವು ತಿಂಗಳುಗಳಲ್ಲಿ ಪರವಾನಗಿ ಅವಧಿ ಮುಗಿದಿರುವ ಒಟ್ಟು 12,000 ಕ್ಕೂ ಹೆಚ್ಚು NGO ಗಳು ತಮ್ಮ FCRA ಪರವಾನಗಿಗಳನ್ನು ಕಳೆದುಕೊಂಡಿವೆ.

ಈ ಪಟ್ಟಿಯಲ್ಲಿ ಕ್ಷಯರೋಗ ಅಸೋಸಿಯೇಷನ್ ​​ಆಫ್ ಇಂಡಿಯಾ, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ಮತ್ತು ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಸೇರಿವೆ.

ಇದನ್ನೂ ಓದಿ:ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಆಕ್ಸ್‌ಫ್ಯಾಮ್ ಇಂಡಿಯಾವು ಎಫ್‌ಸಿಆರ್‌ಎ ಪ್ರಮಾಣಪತ್ರಗಳ ಅವಧಿ ಮುಗಿದಿರುವ ಎನ್‌ಜಿಒಗಳ ಪಟ್ಟಿಯಲ್ಲಿದೆ ಮತ್ತು ನೋಂದಣಿ ರದ್ದುಗೊಂಡವರ ಪಟ್ಟಿಯಲ್ಲಿಲ್ಲ.

ಭಾರತದಲ್ಲಿ ಈಗ ಕೇವಲ 16,829 ಎನ್‌ಜಿಒಗಳು ಎಫ್‌ಸಿಆರ್‌ಎ ಪರವಾನಗಿಯನ್ನು ಹೊಂದಿವೆ. ಅದನ್ನು ನಿನ್ನೆ ಮಾರ್ಚ್ 31, 2022 ರವರೆಗೆ ನವೀಕರಿಸಲಾಗಿದೆ. ಶುಕ್ರವಾರ ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವವನ್ನು ಮಾರ್ಚ್ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಿದೆ.

ಅದಾಗ್ಯೂ ಮದರ್‌ ಥೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ನವೀಕರಣ ಅರ್ಜಿಗಳನ್ನು ಒಕ್ಕೂಟ ಸರ್ಕಾರವು ತಿರಸ್ಕರಿಸಿದೆ. ಅವರ ಪರವಾನಗಿಯನ್ನು ನವೀಕರಿಸದಿರಲು ಗೃಹ ಸಚಿವಾಲಯವು “ಪ್ರತಿಕೂಲ ವಿಷಯಗಳನ್ನು” ಉಲ್ಲೇಖಿಸಿದೆ.

ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಒಕ್ಕೂಟ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಜೊತೆಗೆ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಗೃಹ ಸಚಿವಾಲಯ ಸ್ವೀಕರಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...