Homeಮುಖಪುಟದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

- Advertisement -
- Advertisement -

ಡ್ರಗ್‌ ದಂಧೆಕೋರನನ್ನು ಬಂಧಿಸಲು ಹೋದ ದೆಹಲಿ ಪೊಲೀಸರ ಮೇಲೆ ಗುಂಪೊಂದು ಕಲ್ಲು ತೂರಾಟ ಮಾಡಿರುವ ಘಟನೆ ರಾಷ್ಟ್ರದ ರಾಜಧಾನಿಯ ಇಂದ್ರಪುರಿ ಪ್ರದೇಶದಲ್ಲಿ ನಡೆದಿದೆ.

ಇಬ್ಬರು ವ್ಯಕ್ತಿಗಳಿಗೆ ಗುಂಡು ಬಿದ್ದಿದ್ದು, ನಾಲ್ವರು ಪೊಲೀಸರೂ ಗಾಯಗೊಂಡಿದ್ದಾರೆ. ವಾಂಟೆಡ್ ಡ್ರಗ್ ಸ್ಮಗ್ಲರ್ ಧರಂವೀರ್ ಅಲಿಯಾಸ್ ಪಲ್ಲಾನನ್ನು ಬಂಧಿಸಲು ನಾರ್ಕೋಟಿಕ್ಸ್ ತಂಡವು ಇಂದ್ರಪುರಿಗೆ ಹೋಗಿತ್ತು. ದಾಳಿ ವೇಳೆ ಪಲ್ಲಾ ಮನೆಯಲ್ಲಿ ಇರಲಿಲ್ಲ.

“ನಾರ್ಕೋಟಿಕ್ಸ್‌ ತಂಡವು ಪಲ್ಲಾ ಅವರ ಮನೆಯಿಂದ ಹೊರಬಂದ ತಕ್ಷಣ, ಧರ್ಮವೀರ್ ಅಲಿಯಾಸ್ ಪಲ್ಲಾ ಸುಮಾರು 50-60 ಜನರೊಂದಿಗೆ ಬಂದು ದೊಣ್ಣೆ ಮತ್ತು ಕಲ್ಲುಗಳೊಂದಿಗೆ ದಾಳಿ ನಡೆಸಿದನು. ಈ ದುಷ್ಕರ್ಮಿಗಳ ಗುಂಪು ಏಕಾಏಕಿ ಪೊಲೀಸ್ ತಂಡದ ಮೇಲೆ ದಾಳಿ ಮಾಡಿ ಕಲ್ಲು ತೂರಾಟ ನಡೆಸಿತು. ರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಹೀಗಾಗಿ ಇಬ್ಬರು ಗಾಯಗೊಂಡಿದ್ದಾರೆ” ಎಂದು ದೆಹಲಿ ಪೊಲೀಸರ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಕಲ್ಲು ತೂರಾಟ ಮತ್ತು ಗುಂಡಿನ ದಾಳಿಯ ವೇಳೆ ಇನ್ಸ್‌ಪೆಕ್ಟರ್, ಎಎಸ್‌ಐ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಧರಂವೀರ್ ಅಲಿಯಾಸ್ ಪಲ್ಲಾ ಪರಾರಿಯಾಗಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರನ್ನು ಅಮಿತ್ ಮತ್ತು ಸೊಹೈಬ್ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ, ಅಮಿತ್ ಡ್ರಗ್ ಡೀಲರ್ ಧರಂವೀರ್ ಅಲಿಯಾಸ್ ಪಲ್ಲಾನ ಸಂಬಂಧಿ ಎಂದು ತಿಳಿದುಬಂದಿದೆ.

ಅಮಿತ್ ದೆಹಲಿಯ ರಘುಬೀರ್ ನಗರದ ನಿವಾಸಿಯಾಗಿದ್ದು, ಈ ಹಿಂದೆ ದರೋಡೆ, ಡಕಾಯಿತಿ ಮತ್ತು ಕೊಲೆ ಯತ್ನ ಸೇರಿದಂತೆ ಆರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಧರಂವೀರ್ ಅಲಿಯಾಸ್ ಪಲ್ಲಾನನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.


ಇದನ್ನೂ ಓದಿರಿ: ತಮಿಳುನಾಡು ಪಟಾಕಿ ಘಟಕದಲ್ಲಿ ಸ್ಫೋಟ: 4 ಕಾರ್ಮಿಕರು ಸಾವು, 7 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...