Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...