Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...