Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...