Homeಕರ್ನಾಟಕಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

ಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

- Advertisement -
- Advertisement -

ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ರಾಜ್ಯ ಸಮಿತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಕಾ. ಶರಣಪ್ಪ ಉದ್ಬಾಳ್. “ಕೋವಿಡ್ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ ಪ್ಲಾನ್ ದರಗಳನ್ನು ಒಂದು ವರ್ಷದಲ್ಲಿ ಪ್ರತಿಶತ 100ರಷ್ಟು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.  ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ” ಎಂದಿದ್ದಾರೆ.

“ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ 20 ರಿಂದ 25% ವರೆಗೆ ಹೆಚ್ಚಿಸಿವೆ. ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ.  ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಎಐಡಿವೈಓ ರಾಜ್ಯ ಉಪಾಧ್ಯಕ್ಷ ಕಾ. ವಿನಯ್ ಸಾರಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, “ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್ಎನ್ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ  ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ” ಎಂದರು.

ಪ್ರತಿಭಟನೆ ಬಳಿಕ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI)ದ ಕಚೇರಿಗೆ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗಿದೆ.

ಹಕ್ಕೊತ್ತಾಯಗಳು

೧. ಅಸಮಂಜಸವಾದ ಪ್ರಿಪೇಯ್ಡ್ ರಿಚಾರ್ಜ್ ದರ ಹೆಚ್ಚಳವನ್ನು ತಕ್ಷಣವೇ ಹಿಂಪಡೆಯಿರಿ.

೨ ಖಾಸಗಿ ಟೆಲಿಕಾಂ ಕಂಪನಿಗಳಲ್ಲಿ ಸಕ್ರಿಯ ಪಾತ್ರ ವಹಿಸಲು ಮತ್ತು ಮೊಬೈಲ್ ಬಳಕೆದಾರರ ಹಿತಾಸಕ್ತಿಗಳನ್ನು ರಕ್ಷಿಸಲುTRAI ಮೂಕ ಪ್ರೇಕ್ಷಕರಾಗಿ ಉಳಿಯದೇ ತಕ್ಷಣವೇ ಕ್ರಮ ಕೈಗೊಳ್ಳಬೇಕು.

3. ಬಿಎಸ್ಎನ್ಎಲ್ ಪುನಶ್ಚೇತನಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

4. ಅತ್ಯಗತ್ಯ ಸೇವೆಯಾಗಿರುವ ಟೆಲಿಕಾಂ ವಲಯದ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸಬೇಕು.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...