Homeಕರ್ನಾಟಕಕೊರಗರ ಮೇಲಿನ ಹಲ್ಲೆ: ಕೋಟ ಪೊಲೀಸರದು ಅತಿರೇಕದ ವರ್ತನೆ, ಗಾಯಾಳುಗಳಿಗೆ 2 ಲಕ್ಷ ಪರಿಹಾರ- ಗೃಹ...

ಕೊರಗರ ಮೇಲಿನ ಹಲ್ಲೆ: ಕೋಟ ಪೊಲೀಸರದು ಅತಿರೇಕದ ವರ್ತನೆ, ಗಾಯಾಳುಗಳಿಗೆ 2 ಲಕ್ಷ ಪರಿಹಾರ- ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಬ್ರಹ್ಮಾವರ ತಾಲ್ಲೂಕಿನ ಕೋಟತಟ್ಟು ಗ್ರಾಮದ ಚಿಟ್ಟೆಬೆಟ್ಟು ಕೊರಗ ಕಾಲೋನಿಯಲ್ಲಿ ಕಳೆದ ಡಿ.27ರ ರಾತ್ರಿ ಜರುಗಿದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ಪೊಲೀಸರು ನಡೆಸಿದ ದೌರ್ಜನ್ಯ ಮತ್ತು ಸಮುದಾಯದ ಯುವಕರ ವಿರುದ್ದ ದಾಖಲಾದ ಸುಳ್ಳು ದೂರಿನ ಪ್ರಕರಣದ ಸಮಗ್ರ ತನಿಖೆ ಸಿಓಡಿಗೆ ವಹಿಸಲಾಗಿದೆ ಎಂದು ಗೃಹ ಮಂತ್ರಿ ಅರಗ ಜ್ಞಾನೇಂದ್ರ ಘೋಷಿಸಿದ್ದಾರೆ.

ಪ್ರಕರಣ ನಡೆದ ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲೋನಿಗೆ ಜ.1ರಂದು ಭೇಟಿ ಕೊಟ್ಟು ನೊಂದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುಮಗ ಮತ್ತು ಮನೆಯ ಹೆಣ್ಣು ಮಕ್ಕಳ ಮೇಲೆ ಪೊಲೀಸರು ಲಾಠಿ ಬೀಸಿರುವುದು ಅತಿರೇಕ ಕ್ರಮವಾಗಿದ್ದು, ಇದರಿಂದ ಬೇಸರವಾಗಿದೆ. ಅದಕ್ಕೆ ಪೊಲೀಸರು ತಕ್ಕ ಬೆಲೆ ತೆರಲೇಬೇಕು. ಗಾಯಾಳುಗಳಿಗೆ ತಲಾ 2ಲಕ್ಷ ಪರಿಹಾರ ನೀಡಲಾಗುತ್ತಿದ್ದು, ತಕ್ಷಣಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ರೂ.50,000 ವಿತರಿಸಲಾಗುತ್ತಿದೆ ಎಂದು ಹೇಳಿದರು.

ಹಲ್ಲೆ ನಡೆಸಿದ ಪಿಎಸ್‌ಐ ಅಮಾನತು ಮಾಡಲಾಗಿದ್ದು, ದಾಳಿಯಲ್ಲಿದ್ದ ಪೊಲೀಸರನ್ನು ವರ್ಗಾಯಿಸಲಾಗಿದೆ. ಇವರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯವಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವರ ಹೇಳಿಕೆ ಗಮನಿಸಿದರೆ ಈ ಪ್ರಕರಣ ಇಷ್ಟಕ್ಕೇ ನಿಲ್ಲುವಂತೆ ಕಾಣಿಸುತ್ತಿಲ್ಲ. ಈ ಬಗ್ಗೆ ನಮ್ಮ ಅಸಮಾಧಾನ ವ್ಯಕ್ತಪಡಿಸಲು ಜ.3ರಂದು ಜಿಲ್ಲೆಯ ಎಲ್ಲ ಕೊರಗ ಸಂಘಟನೆಗಳು ಒಂದಾಗಿ ಮಣಿಪಾಲದಲ್ಲಿ ಬೃಹತ್ ಜಾಥಾ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದ್ದೇವೆ. ಒಂದು ವಾರದಲ್ಲಿ ಕೊರಗರ ಮೇಲೆ ಹಾಕಿರುವ ಸುಳ್ಳು ಕೇಸು ವಾಪಸ್ ಪಡೆಯದಿದ್ದರೆ ತೀವ್ರ ಹೋರಾಟ ಮಾಡಲಾಗುವುದೆಂದು ಕೊರಗ ಮುಖಂಡ ಗಣೇಶ್ ಕುಂದಾಪುರ ಹೇಳಿದ್ದಾರೆ.


ಇದನ್ನೂ ಓದಿ: ಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...