Homeಮುಖಪುಟಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಅಮಿತ್ ಶಾ ಪ್ರಧಾನಿಯನ್ನು 'ಹುಚ್ಚ' ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ರೈತರ ವಿಷಯವಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಹಿಂದೆ ಭೇಟಿ ಮಾಡಿದ್ದೆ. ಆಗ ಅವರು ಅಹಂಕಾರದಿಂದ ನಡೆದುಕೊಂಡಿದ್ದರು. ಪ್ರಧಾನಿ ಮೋದಿಯನ್ನು ಗೃಹ ಸಚಿವ ಅಮಿತ್‌ ಶಾ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು ಎಂದು ಮೇಘಾಲಯ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಭಾನುವಾರ ತಿಳಿಸಿದ್ದಾರೆ.

ಹರಿಯಾಣದ ದಾದ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮೋದಿ ಭೇಟಿ ವೇಳೆ 500ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ಕಳೆದುಕೊಳ್ಳಬೇಕಾಗಿದೆ ಎಂಬ ವಿಷಯ ಪ್ರಸ್ತಾಪಿಸಿದೆ. ಆಗ ಕುಪಿತರಾದ ಅವರು ರೈತರು ನನಗಾಗಿ ಸತ್ತರೆ ಎಂದು ಪ್ರಶ್ನಿಸಿದ್ದರು. ಹೌದು ನೀವು ರಾಜನಾದ ನಂತರ ಅವತು ಮೃತಪಟ್ಟಿದ್ದಾರೆ ಎಂದು ಉತ್ತರಿಸಿದ್ದೆ” ಎಂದು ಹೇಳಿದ್ದಾರೆ.

ಅವರೊಂದಿಗೆ ಮಾತುಕತೆ ಆರಂಭಿಸಿದ 5 ನಿಮಿಷದ ಒಳಗಾಗಿ ಅವರು ಬಹಳ ಅಹಂಕಾರದಿಂದ ನಡೆದುಕೊಂಡರು. ನಾನು ಜಗಳವಾಡುತ್ತಾ ಮಾತುಕತೆ ಮುಗಿಸಿದೆ. ನಂತರ ಅಮಿತ್‌ ಶಾರವರನ್ನು ಭೇಟಿಯಾಗಲು ತಿಳಿಸಿದರು. ಒಂದು ನಾಯಿ ಸತ್ತರು ಕೂಡ ಪ್ರಧಾನಿ ಸಂತಾಪ ಸೂಚಿಸುತ್ತಾರೆ ಆದರೆ ರೈತರ ಬಗ್ಗೆ ಕಾಳಜಿ ತೋರಲಿಲ್ಲ ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ನಂತರ ನಾನು ಅಮಿತ್‌ ಶಾರವರನ್ನು ಭೇಟಿಯಾಗಿ ಈ ವಿಷಯ ತಿಳಿಸಿದೆ. ಆಗ ಅವರು “ಸತ್ಯ, ಅವರು ಸ್ಥಿಮಿತತೆ ಕಳೆದುಕೊಂಡಿದ್ದಾರೆ. ನೀವು ಚಿಂತಸಬೇಡಿ ಮತ್ತು ನಮ್ಮೊಂದಿಗೆ ಸಂಪರ್ಕದಿಂದಿರಿ ಎಂದು ಹೇಳಿದರು. ಗೃಹ ಮಂತ್ರಿ ಅಮಿತ್‌ ಶಾರವರು ಪಿಎಂ ಮೋದಿಯನ್ನು ಈ ರೀತಿ ಉಲ್ಲೇಖಿಸಿದ್ದರು” ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ಅವರ ಈ ಹೇಳಿಕೆ ವೈರಲ್ ಆಗತೊಡಗಿದೆ. ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸತ್ಯಪಾಲ್ ಮಲಿಕ್ ಅವರು ಮಾತನಾಡಿರುವ ವೀಡಿಯೊವನ್ನು ಹಂಚಿಕೊಂಡಿದ್ದು, “ಸ್ವಪ್ರತಿಷ್ಠೆ… ಕ್ರೌರ್ಯ… ಅಸೂಕ್ಷ್ಮತೆ. ಪ್ರಧಾನಿ ಮೋದಿಯವರ ವ್ಯಕ್ತಿತ್ವದಲ್ಲಿ ಅಡಕವಾಗಿರುವ ಈ ಗುಣಗಳನ್ನು ಬಿಜೆಪಿ ರಾಜ್ಯಪಾಲರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಇದು ಪ್ರಜಾಪ್ರಭುತ್ವಕ್ಕೆ ಕಳವಳಕಾರಿ ವಿಷಯ” ಎಂದು ಟೀಕಿಸಿದೆ.

ಮಲ್ಲಿಕಾರ್ಜುನ ಖರ್ಗೆಯವರು ಟ್ವೀಟ್ ಮಾಡಿ “ಮೇಘಾಲಯದ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ‘ಅಹಂಕಾರಿ’ ಎಂದು ಹೇಳುತ್ತಿದ್ದಾರೆ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಧಾನಿಯನ್ನು ‘ಹುಚ್ಚ’ ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಮತ್ತು ಎಂಎಸ್‌ಪಿ ಜಾರಿಗೆ ಕಾನೂನು ರಚಿಸಬೇಕು. ಏಕೆಂದರೆ ರೈತ ಹೋರಾಟ ನಿಂತಿಲ್ಲ, ಅದು ತಾತ್ಕಾಲಿಕವಾಗಿ ಅಮಾನತ್ತಾಗಿದೆ ಅಷ್ಟೇ ಎಂದು ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ಮತ್ತು ಗೋವಾದ ನಂತರ ಮೇಘಾಲಯದ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲ್ಲಿಕ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದರು.

“ನಾಯಿ ಕಚ್ಚಿ ಸತ್ತವರಿಗೂ ಸಂತಾಪ ಸೂಚಿಸುವವರಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮಡಿದ 600ಕ್ಕೂ ಹೆಚ್ಚು ರೈತರು ಕಾಣದಿರುವುದು ದುರಂತ ಎಂದು ಮೋದಿ ವಿರುದ್ಧ 2021ರ ನವೆಂಬರ್‌ನಲ್ಲಿ ಕಿಡಿಕಾರಿದ್ದ ಅವರು, ಕೇಂದ್ರ ಸರ್ಕಾರದಲ್ಲಿ ಬಹಳಷ್ಟು ಮಂದಿ ರೈತರ ಪರವಾಗಿದ್ದಾರೆ. ಆದರೆ ಒಂದಿಬ್ಬರ ಅಹಂನಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ” ಎಂದಿದ್ದರು.


ಇದನ್ನೂ ಓದಿ: ಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...