Homeಕರ್ನಾಟಕಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ವಿದ್ಯಾರ್ಥಿನಿಯೂ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು

- Advertisement -
- Advertisement -

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿರೋಧ ವ್ಯಕ್ತವಾದಾಗ ಬಡ, ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆಯೊಂದರಲ್ಲಿ ಆಕ್ರೋಶಭರಿತವಾಗಿ ಮಾತಾಡಿದ್ದ ವಿದ್ಯಾರ್ಥಿನಿ ಅಂಜಲಿ ಅವರನ್ನು ಗಂಗಾವತಿಯಲ್ಲಿ ನಡೆಯುತ್ತಿರುವ ಸಿಪಿಐ(ಎಂ) ರಾಜ್ಯ ಸಮ್ಮೇಳನದ ವೇದಿಕೆಯಲ್ಲಿ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್‌ ಅಭಿನಂದಿಸಿ ಗೌರವಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ನಡೆಯುತ್ತಿದೆ. ಗಂಗಾವತಿಯ ಎಂಎನ್ಎಂ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅಂಜಲಿ ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ಇತ್ತೀಚೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. ಈ ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿದ್ಯಾರ್ಥಿನಿಯ ಮಾತಿಗೆ ಜನರು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ:ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ವಿದ್ಯಾರ್ಥಿನಿ ಅಂಜಲಿಯನ್ನು ಸಮ್ಮೇಳನದ ವೇದಿಕೆಯಲ್ಲಿ ಸನ್ಮಾನಿಸಿದ ಪ್ರಕಾಶ್ ಕಾರಟ್‌‌, ಸಮ್ಮೇಳನದ ಪ್ರತಿನಿಧಿಗಳ ಪರವಾಗಿ ಸ್ಮರಣಿಕೆ ಹಾಗೂ ಸಾವಿತ್ರಿ ಭಾಯಿ ಫುಲೆ ಪುಸ್ತಕ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ)ದ ನೇತೃತ್ವದಲ್ಲಿ ಡಿಸೆಂಬರ್‌ 11 ರ ಶನಿವಾರದಂದು ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಅಂಜಲಿ, ಶಾಲೆಗಳಲ್ಲಿ ಮೊಟ್ಟೆ ವಿತರಿಸುವುದನ್ನು ಮಠಾಧೀಶರು ವಿರೋಧಿಸುವುದು ಮುಂದುವರಿಸಿದಲ್ಲಿ, ನಾವು ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ ಮತ್ತು ಬಾಳೆಹಣ್ಣು ಸೇವಿಸುತ್ತೇವೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

“ಬಡತನ ಇರುವುದರಿಂದ ನಾವು ಸರ್ಕಾರಿ ಶಾಲೆಗೆ ಬರುತ್ತೇವೆ. ನಾವು ಮೊಟ್ಟೆ ತಿಂದದೆ ಬದುಕುತ್ತೇವೆ. ಇಲ್ಲದಿದ್ದರೆ, ಸತ್ತು ಹೋಗುತ್ತೇವೆ. ನಾವು ಮೊಟ್ಟೆ ಸೇವಿಸುವುದು ಬೇಕಾ ಇಲ್ಲವೇ, ಮೊಟ್ಟೆ ವಿತರಣೆ ಮಾಡದಿರುವುದು ಬೇಕಾ?” ಎಂದು ಅವರು ಪ್ರಶ್ನಿಸಿದ್ದರು.

“ನಮ್ಮ ಬೆನ್ನಿಗೆ ಯಾರೂ ಇಲ್ಲ ಎಂದು ತಿಳಿದಿದ್ದೀರಾ?. ಶಾಲೆ, ಪೋಷಕರು, ಶಿಕ್ಷಕರು, ಎಸ್ಎಫ್ಐ ಸಂಘಟನೆಯವರು ಇದ್ದಾರೆ. ಮೊಟ್ಟೆ ವಿತರಿಸಲು ಮಠಾಧೀಶರು ವಿರೋಧ ವ್ಯಕ್ತಪಡಿಸಿದರೆ, ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ, ಬಾಳೆ ಹಣ್ಣು ಸೇವಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದರು.

ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕದ ಸರಕಾರಿ, ಅನುದಾನಿತ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿತ್ತು. ಆದರೆ ಮಠಗಳ ಸ್ವಾಮಿಗಳು ಮತ್ತು ಬಿಜೆಪಿ ಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಇದನ್ನೂ ಓದಿ:ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...