Homeಕರ್ನಾಟಕಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ವಿದ್ಯಾರ್ಥಿನಿಯೂ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು

- Advertisement -
- Advertisement -

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿರೋಧ ವ್ಯಕ್ತವಾದಾಗ ಬಡ, ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆಯೊಂದರಲ್ಲಿ ಆಕ್ರೋಶಭರಿತವಾಗಿ ಮಾತಾಡಿದ್ದ ವಿದ್ಯಾರ್ಥಿನಿ ಅಂಜಲಿ ಅವರನ್ನು ಗಂಗಾವತಿಯಲ್ಲಿ ನಡೆಯುತ್ತಿರುವ ಸಿಪಿಐ(ಎಂ) ರಾಜ್ಯ ಸಮ್ಮೇಳನದ ವೇದಿಕೆಯಲ್ಲಿ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್‌ ಅಭಿನಂದಿಸಿ ಗೌರವಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ನಡೆಯುತ್ತಿದೆ. ಗಂಗಾವತಿಯ ಎಂಎನ್ಎಂ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅಂಜಲಿ ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ಇತ್ತೀಚೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. ಈ ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿದ್ಯಾರ್ಥಿನಿಯ ಮಾತಿಗೆ ಜನರು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ:ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ವಿದ್ಯಾರ್ಥಿನಿ ಅಂಜಲಿಯನ್ನು ಸಮ್ಮೇಳನದ ವೇದಿಕೆಯಲ್ಲಿ ಸನ್ಮಾನಿಸಿದ ಪ್ರಕಾಶ್ ಕಾರಟ್‌‌, ಸಮ್ಮೇಳನದ ಪ್ರತಿನಿಧಿಗಳ ಪರವಾಗಿ ಸ್ಮರಣಿಕೆ ಹಾಗೂ ಸಾವಿತ್ರಿ ಭಾಯಿ ಫುಲೆ ಪುಸ್ತಕ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ)ದ ನೇತೃತ್ವದಲ್ಲಿ ಡಿಸೆಂಬರ್‌ 11 ರ ಶನಿವಾರದಂದು ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಅಂಜಲಿ, ಶಾಲೆಗಳಲ್ಲಿ ಮೊಟ್ಟೆ ವಿತರಿಸುವುದನ್ನು ಮಠಾಧೀಶರು ವಿರೋಧಿಸುವುದು ಮುಂದುವರಿಸಿದಲ್ಲಿ, ನಾವು ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ ಮತ್ತು ಬಾಳೆಹಣ್ಣು ಸೇವಿಸುತ್ತೇವೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

“ಬಡತನ ಇರುವುದರಿಂದ ನಾವು ಸರ್ಕಾರಿ ಶಾಲೆಗೆ ಬರುತ್ತೇವೆ. ನಾವು ಮೊಟ್ಟೆ ತಿಂದದೆ ಬದುಕುತ್ತೇವೆ. ಇಲ್ಲದಿದ್ದರೆ, ಸತ್ತು ಹೋಗುತ್ತೇವೆ. ನಾವು ಮೊಟ್ಟೆ ಸೇವಿಸುವುದು ಬೇಕಾ ಇಲ್ಲವೇ, ಮೊಟ್ಟೆ ವಿತರಣೆ ಮಾಡದಿರುವುದು ಬೇಕಾ?” ಎಂದು ಅವರು ಪ್ರಶ್ನಿಸಿದ್ದರು.

“ನಮ್ಮ ಬೆನ್ನಿಗೆ ಯಾರೂ ಇಲ್ಲ ಎಂದು ತಿಳಿದಿದ್ದೀರಾ?. ಶಾಲೆ, ಪೋಷಕರು, ಶಿಕ್ಷಕರು, ಎಸ್ಎಫ್ಐ ಸಂಘಟನೆಯವರು ಇದ್ದಾರೆ. ಮೊಟ್ಟೆ ವಿತರಿಸಲು ಮಠಾಧೀಶರು ವಿರೋಧ ವ್ಯಕ್ತಪಡಿಸಿದರೆ, ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ, ಬಾಳೆ ಹಣ್ಣು ಸೇವಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದರು.

ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕದ ಸರಕಾರಿ, ಅನುದಾನಿತ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿತ್ತು. ಆದರೆ ಮಠಗಳ ಸ್ವಾಮಿಗಳು ಮತ್ತು ಬಿಜೆಪಿ ಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಇದನ್ನೂ ಓದಿ:ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....