Homeಮುಖಪುಟತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

ತನ್ನದೇ ಪಕ್ಷದ ಶಾಸಕನನ್ನು ‘ಭೂ ಮಾಫಿಯ’ ಎಂದ ತ್ರಿಪುರಾ ಸಿಎಂ ಬಿಪ್ಲಬ್ ದೇಬ್!

- Advertisement -
- Advertisement -

ತ್ರಿಪುರಾದ ಆಡಳಿತಾರೂಢ ಬಿಜೆಪಿಯೊಳಗಿನ ಬಣ ವೈಷಮ್ಯವು ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಶನಿವಾರ ಪಕ್ಷದ ಶಾಸಕ ಆಶಿಸ್ ಕುಮಾರ್ ಸಹಾ ಅವರನ್ನು ‘ಭೂ ಮಾಫಿಯಾ’ ಎಂದು ಕರೆದಿದ್ದು, ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾರಾದರೂ ರಾಜಕೀಯವನ್ನು ಗುರಾಣಿಯಾಗಿ ಬಳಸಿಕೊಂಡು ಭೂ ಒತ್ತುವರಿಯಂತಹ ಕಾನೂನುಬಾಹಿರ ಕೃತ್ಯಗಳನ್ನು ನಡೆಸಿದರೆ, ಕಾನೂನು ಕ್ರಮದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಯಾರನ್ನೂ ಬಿಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಪ್ಲಬ್‌ ದೇಬ್ ಹೇಳಿದ್ದಾರೆ.

ಇದನ್ನೂ ಓದಿ:ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಶಿಸ್‌ ಕುಮಾರ್‌ ಸಹಾ, “ಈ ಆರೋಪದ ಕುರಿತು ತನಿಖೆ ನಡೆಸಿ ಸಾಧ್ಯವಾದರೆ ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಒಂದು ದಿನ ಮೊದಲು, ಕಳೆದ 30 ವರ್ಷಗಳಿಂದ ಶಾಸಕ ಆಶಿಸ್‌ ಸಹಾ ಅವರ ವಶದಲ್ಲಿದ್ದ ಉಜ್ಜಯಂತ ಅರಮನೆ ಮುಂಭಾಗದ ಕಟ್ಟಡದ ಒಂದು ಭಾಗವನ್ನು ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್‌ (ಎಎಂಸಿ) ಕೆಡವಿತ್ತು. ಈ ಕಟ್ಟಡವನ್ನು ಎಡಪಂಥ ವಿರೋಧಿ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬಳಸಲಾಗುತ್ತು.

ನಗರದ ಹೃದಯ ಭಾಗದಲ್ಲಿರುವ 7,000 ಚದರ ಅಡಿ ಅಳತೆಯ ಸರ್ಕಾರಿ ಭೂಮಿಯನ್ನು ಶಾಸಕ ಆಶಿಸ್‌ ಸಹಾ ಮತ್ತು ಟಿಎಂಸಿ ರಾಜ್ಯ ಸಂಚಾಲಕ ಸುಬಾಲ್ ಭೌಮಿಕ್ 90ರ ದಶಕದ ಆರಂಭದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅದನ್ನು ತಮ್ಮ ವೈಯಕ್ತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಎಎಂಸಿ ಮೇಯರ್ ದೀಪಕ್ ಮಜುಂದಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:ತ್ರಿಪುರದಲ್ಲಿ ನಟಿ, ಟಿಎಂಸಿ ನಾಯಕಿ ಸಯೋನಿ ಘೋಷ್ ಮೇಲೆ ಹಲ್ಲೆ, ಬಂಧನ – ಪ್ರತಿಭಟನೆಗೆ ಸಜ್ಜು

ಆರಂಭದಲ್ಲಿ ಈ ಕಟ್ಟಡವನ್ನು ಕಾಂಗ್ರೆಸ್ ಪಕ್ಷ, ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳಿಗೆ ಬಳಸಲಾಯಿತು. 2018 ರಲ್ಲಿ ಬಿಜೆಪಿ ಟಿಕೆಟ್‌ ಮೂಲಕ ಆಶಿಸ್‌‌ ಸಹಾ ಶಾಸಕರಾದಾಗ ಸರ್ಕಾರಿ ನೌಕರರ ಒಕ್ಕೂಟದ ಕಚೇರಿಯಾಗಿ ಬದಲಾಯಿತು.

“ಎಡರಂಗದ ಆಡಳಿತಾವಧಿಯಲ್ಲಿ ಈ ಕಟ್ಟಡವನ್ನು ಮರಳಿ ಪಡೆಯಲು ಆಗಿನ ಎಎಂಸಿ ಹಲವಾರು ಪ್ರಯತ್ನಗಳನ್ನು ಮಾಡಿ ವಿಫಲವಾಗಿತ್ತು. ಆದರೆ ನಾವು ಎಎಂಸಿಯ ಅಧಿಕಾರ ವಹಿಸಿಕೊಂಡ ಎರಡು ವಾರಗಳ ಹಿಂದೆ ನಂತರ, ನಗರದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿರುವ ಎಲ್ಲಾ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಿದ್ದೇವೆ. ಅನಧಿಕೃತ ವ್ಯಾಪಾರಿಗಳು, ಎಲ್ಲಾ ಫುಟ್‌ಪಾತ್‌ ಅತಿಕ್ರಮಣಗಳನ್ನು ಯಾವುದೆ ರಾಜಕೀಯ ಬಣ್ಣವನ್ನು ಲೆಕ್ಕಿಸದೇ ತೆರವುಗೊಳಿಸುತ್ತೇವೆ” ಎಂದು ಮೇಯರ್‌ ಮಜುಂದಾರ್ ಹೇಳಿದ್ದಾರೆ.

ಮೇಯರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಆಶಿಸ್‌ ಸಹಾ ಮತ್ತು ಸುಬಾಲ್ ಭೌಮಿಕ್, “ಇದು ವೈಯಕ್ತಿಕ ಆಸ್ತಿಯಾಗಿದ್ದು, ಹಲವಾರು ಪ್ರಯತ್ನಗಳನ್ನು ಮಾಡಿ ಎಡರಂಗ ಸರ್ಕಾರಕ್ಕೇ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ:ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

“ತನ್ನದೇ ಶಾಸಕರ ಬಗ್ಗೆ ಸರ್ಕಾರದ ವರ್ತನೆಯನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಇದು ರಾಜಕೀಯ ದ್ವೇಷದಿಂದ ಪ್ರೇರಿತವಾದ ಹೆಜ್ಜೆಯಾಗಿದೆ. ಹೈಕೋರ್ಟ್‌ನಲ್ಲಿ ಪರಿಹಾರಕ್ಕಾಗಿ ಹೊಸ ಪ್ರಕರಣವನ್ನು ದಾಖಲಿಸುತ್ತೇನೆ” ಎಂದು ಆಶಿಸ್‌ ಸಹಾ ಹೇಳಿದ್ದಾರೆ.

ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಮರ್ ರಾಯ್ ಕೂಡ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾವು ಮೊದಲಿನಿಂದಲೂ ಎಡಪಕ್ಷಗಳ ವಿರುದ್ಧ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ನೀಡಿ ಈಗಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೇಯರ್ ಮಾಡಿದ್ದು ಅಕ್ರಮವಾಗಿದ್ದು, ಯಾರನ್ನೋ ಮೆಚ್ಚಿಸಲು ಬಯಸಿದ್ದರು. ಆದರೆ ಇದನ್ನು ನಾವು ಸುಲಭವಾಗಿ ಮರೆಯುವುದಿಲ್ಲ” ಎಂದು ಸಮರ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ:ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...