Homeಮುಖಪುಟಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಡಿ.ಕೆ.ಸುರೇಶ್‌, ಅಶ್ವತ್ಥ್ ನಾರಾಯಣ್ ನಡುವಿನ ಜಗಳದ ವಿಡಿಯೊ ವೈರಲ್ ಆಗಿದೆ. ಇತ್ತ ಕಳೆದ 24 ದಿನಗಳಿಂದ ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಸಚಿವ ಅಶ್ವತ್ಥ್‌ ನಾರಾಯಣ್ ಅವರಿಗೆ ತಮ್ಮ ಬೇಡಿಕೆಗಳನ್ನು ಮತ್ತೆ ನೆನಪಿಸಿದ್ದಾರೆ.

- Advertisement -
- Advertisement -

“ಉನ್ನತ ಶಿಕ್ಷಣ ಸಚಿವರಾದ ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರೇ ನೀವು ನಿಮ್ಮ ಕೆಲಸವನ್ನು ತೋರಿಸಬೇಕಿದೆ” ಎಂದು ಹೇಳಿರುವ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಸಚಿವರಿಗೆ ನೆನಪಿಸಿದ್ದಾರೆ.

ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇಳೆ ಉನ್ನತ ಸಚಿವ ಅಶ್ವತ್ಥ್‌ ನಾರಾಯಣ ಅವರು ಮಾತನಾಡುತ್ತಾ, ಸಂಸದ ಡಿ.ಕೆ.ಸುರೇಶ್‌ ಅವರನ್ನು ಗುರಿಯಾಗಿಸಿಕೊಂಡು ಏರುದನಿಯಲ್ಲಿ ಟೀಕಿಸಿದರು. ವೇದಿಕೆಯಲ್ಲಿ ಹಾಜರಿದ್ದ ಡಿ.ಕೆ.ಸುರೇಶ್ ಅವರು ಸಿಟ್ಟಿಗೆದ್ದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್‌ ಮತ್ತು ಅಶ್ವತ್ಥ್‌ ನಾರಾಯಣ್ ನಡುವಿನ ಜಗಳದ ವಿಡಿಯೊ ವೈರಲ್‌ ಆಗಿದ್ದು, ಅಶ್ವತ್ಥ್ ನಾರಾಯಣ ಅವರು ಆಡಿರುವ ಮಾತುಗಳನ್ನು ಉಲ್ಲೇಖಿಸಿ, ಅತಿಥಿ ಉಪನ್ಯಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಶ್ವತ್ಥ್‌ ನಾರಾಯಣ್ ಅವರು ಮಾಡಬೇಕಿರುವ ಸಾಕಷ್ಟು ಕೆಲಸಗಳಿವೆ. ಹೀಗಿರುವ ಇನ್ನೊಬ್ಬರ ಕುರಿತು ರೋಷವೇಶದಿಂದ ಕಮೆಂಟ್ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅತಿಥಿ ಉಪನ್ಯಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆಯ ವಿಡಿಯೊ ವೈರಲ್ ಆದ ಬಳಿಕ ಅತಿಥಿ ಉಪನ್ಯಾಸಕರು ಅಶ್ವತ್ಥ್‌ ನಾರಾಯಣ್‌ ಅವರಿಗೆ ತಮ್ಮ ಜವಾಬ್ದಾರಿಗಳನ್ನು ನೆಪಿಸಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅತಿಥಿ ಉಪನ್ಯಾಸರು ಸಚಿವರ ನಿರ್ಲಕ್ಷ್ಯ ಮನೋಭಾವವನ್ನು ಪ್ರಶ್ನಿಸಿದ್ದಾರೆ.

“ಕಳೆದ ಡಿಸೆಂಬರ್‌ 10ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸುತ್ತಿದ್ದೇವೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕೆಂದು ಆಗ್ರಹಿಸಲಾಗುತ್ತಿದೆ. ನಮ್ಮ ಕಷ್ಟವನ್ನು ಸಚಿವರು ಕೇಳುತ್ತಲೇ ಇಲ್ಲ” ಎನ್ನುತ್ತಾರೆ ಸಾಲಿಗ್ರಾಮ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ದಿನೇಶ್.

ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸಿದ್ದಾರೆ. ಬೆಳಗಾವಿ ಅಧಿವೇಶನ ನಡೆದಾಗ ಸಾವಿರಾರು ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ಸೇರಿ ಪ್ರತಿಭಟಿಸಿದ್ದಾರೆ. ನಮ್ಮ ಕಷ್ಟವನ್ನು ಕೇಳುವ ತಾಳ್ಮೆ ಸಚಿವರಿಗಿಲ್ಲ ಎನ್ನುತ್ತಿದ್ದಾರೆ ಉಪನ್ಯಾಸಕರು.

“ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ನಿಯಮದ ಪ್ರಕಾರ ಸರ್ಕಾರ ನಮಗೆ ಹತ್ತು ತಿಂಗಳು ಕೆಲಸ ಕೊಡಬೇಕು. ಆದರೆ ಸೆಮಿಸ್ಟರ್‌ ವ್ಯವಸ್ಥೆಯಿಂದಾಗಿ ನಮಗೆ ಮೂರು + ಮೂರು ತಿಂಗಳು ಕೆಲಸ ಸಿಗುತ್ತಿದೆ. ಅಂದರೆ ವರ್ಷಕ್ಕೆ ಆರು ತಿಂಗಳು ಮಾತ್ರ ಕೆಲಸ ನೀಡುತ್ತಾರೆ. ಬೇರೆ ರಾಜ್ಯಗಳಲ್ಲಿ ಯುಜಿಸಿ ನಿರ್ದೇಶನದಂತೆ ಅತಿಥಿ ಉಪನ್ಯಾಸಕರಿಗೆ ಉತ್ತಮ ಸಂಬಳ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೇವಲ 11ರಿಂದ 13 ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ” ಎನ್ನುತ್ತಾರೆ ದಿನೇಶ್.

ರಾಜ್ಯದಲ್ಲಿನ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದೇವೆ. ನಮಗೆ ಕಡಿಮೆ ಸಂಬಳ ಕೊಡುವುದಷ್ಟೇ ಅಲ್ಲದೇ ಮೂರು ತಿಂಗಳಾದರೂ ಸಂಬಳವನ್ನು ನೀಡುವುದಿಲ್ಲ. ನಮಗೆ ಯಾವುದೇ ಸೇವಾ ಭದ್ರತೆ ಕೂಡ ಇಲ್ಲ. ಖಾಯಂ ಉಪನ್ಯಾಸಕರು ಸೇವೆಗೆ ಬಂದಾಗ ಬೋಧನ ಕಾರ್ಯಭಾರ ಕಡಿಮೆಯಾಗಿ ನಮ್ಮನ್ನು ಕೆಲಸದಿಂದ ತೆರವು ಮಾಡಲಾಗುತ್ತದೆ. ಜೊತೆಗೆ ನಮಗೆ ಪಿ.ಎಫ್‌. ಆಗಲೀ, ಇಎಸ್‌ಐ ಸೌಲಭ್ಯವೂ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದ್ದಾರೆ. ಕೆಲವು ಕಡೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಈ ರೀತಿಯ ಉದಾರತೆ ಹಾಗೂ ಮಾನವೀಯತೆಯನ್ನು ತೋರಬೇಕಿದೆ. ಸಾಕಷ್ಟು ಅತಿಥಿ ಉಪನ್ಯಾಸಕರು ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕೆಲವರು ಆರ್ಥಿಕ ಪರಿಸ್ಥಿತಿ ಹದಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಅತಿಥಿ ಉಪನ್ಯಾಸಕರ ಅಳಲು.

ಯಾವುದೇ ಪೂರ್ವ ಸಿದ್ಧತೆ ಇಲ್ಲದೆಯೇ ಎನ್‌ಇಪಿ ಜಾರಿಗೆ ಅಶ್ವತ್ಥ್‌ ನಾರಾಯಣ ಅವರು ಉತ್ಸಾಹ ತೋರಿದರು. ಈಗ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿದ್ದಾರೆ. ಎನ್‌ಇಪಿ ಪಠ್ಯಕ್ರಮದಂತೆ ಪಠ್ಯಪುಸ್ತಕವನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಇಲಾಖೆ ವಿಫಲವಾಗಿದೆ. ಇತ್ತ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ನಷ್ಟವಾಗುತ್ತಿದೆ ಎನ್ನುತ್ತಾರೆ ಉಪನ್ಯಾಸಕರು.

ಮೊದಲೆಲ್ಲ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಮುಗಿಯುವವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಅಂದರೆ ವರ್ಷಕ್ಕೆ ಒಂದು ಬಾರಿ ಆದೇಶ ಹೊರಡಿಸಲಾಗುತ್ತಿತ್ತು. ಆದರೆ ಒಂದು ವರ್ಷದಿಂದೀಚೆಗೆ ಪ್ರತಿ ಸೆಮಿಸ್ಟರ್‌‌ ಬಳಿಕ ಆದೇಶ ನೀಡಲಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಿದೆ. ಇತರೆ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸರ್ಕಾರ ಆಹ್ವಾನಿಸಿದರೂ ಅನೇಕ ಅತಿಥಿ ಉಪನ್ಯಾಸಕರು ವಯೋಮಿತಿಯನ್ನು ಮೀರಿದ್ದು, ಅರ್ಜಿ ಹಾಕಲೂ ಅವಕಾಶ ಇಲ್ಲ. ಅನೇಕ ಅತಿಥಿ ಉಪನ್ಯಾಸಕರು ನೆಟ್‌, ಸ್ಲೆಟ್‌ ಮಾಡಿಕೊಂಡಿದ್ದಾರೆ. ಇಷ್ಟು ಅರ್ಹತೆಗಳು ಇದ್ದರೂ ಸೇವಾ ಭದ್ರತೆ ನೀಡುತ್ತಿಲ್ಲ. ಖಾಯಂಗೊಳಿಸುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಹೊಸಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಕರಾದ ಡಾ.ಡಿ.ಡಿ.ಸಂದೀಪ್‌, “ಅತಿಥಿ ಉಪನ್ಯಾಸಕರು ಸೇವಾ ಭದ್ರತೆಗಾಗಿ 24 ದಿನಗಳ ಕಾಲ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ. ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಮನೆಯನ್ನು ನಿರ್ವಿಹಿಸಲು ಆಗಿದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿಲ್ಲ. ಇಂತಹ ಅನೇಕ ಸಮಸ್ಯೆಗಳು ನಿಮ್ಮ ಇಲಾಖೆ ವ್ಯಾಪ್ತಿಯಲ್ಲಿ ಇರುವಾಗ ಬೇರೆಯವರನ್ನು (ಡಿ.ಕೆ.ಸುರೇಶ್) ಕೆಲಸ ಮಾಡಿಲ್ಲ ಎಂದು ಪ್ರಶ್ನೆ ಮಾಡುವುದಕ್ಕೆ ನೈತಿಕತೆ ಇದೇಯೇ? ನೀವು ಮೊದಲು ಕೆಲಸಮಾಡಿ ತೋರಿಸಿ. ಆಮೇಲೆ ಪ್ರಶ್ನೆ ಮಾಡುವುದರಲ್ಲಿ ಅರ್ಥ ಇರುತ್ತದೆ. ನಿಮ್ಮ ಕಾಲಾವಧಿಯಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಅಧೋಗತಿಗೆ ಸಾಗಿದೆ. ಸಮಸ್ಯೆ ಬಗೆಹರಿಸಿ ಅಥವಾ ಮಂತ್ರಿ ಸ್ಥಾನಕ್ಕೆ ತಕ್ಷಣವೇ ರಾಜಿನಾಮೆ ಕೊಡಿ” ಎಂದು ಒತ್ತಾಯಿಸಿದರು.

ಉತ್ತಮ ಆಡಳಿತದ ದಿನದಂದು ಅಳಲು

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ್ ಅವರ ಫೇಸ್‌ಬುಕ್ ಖಾತೆಯ ಮೂಲಕ ಗುಡ್‌ ಗವರ್ನೆನ್ಸ್‌ ಡೇ (ಉತ್ತಮ ಆಡಳಿತ ದಿನ) ಕಾರ್ಯಕ್ರಮದ ಡಿಸೆಂಬರ್‌ 25ರಂದು ನೇರ ಪ್ರಸಾರವಾಗಿತ್ತು. ಆ ವೇಳೆ ಅತಿಥಿ ಉಪನ್ಯಾಸರು ಕಮೆಂಟ್ ಬಾಕ್ಸ್‌ನಲ್ಲಿ ಅಳಲು ತೋಡಿಕೊಂಡಿದ್ದರು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಅತ್ಯುತ್ತಮ ಆಡಳಿತ ದಿನವನ್ನು ಉನ್ನತ ಶಿಕ್ಷಣ ಇಲಾಖೆ, ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಅಶ್ವತ್‌ ನಾರಾಯಣ್ ಅವರು ತಮ್ಮ ಎಫ್‌ಬಿ ಖಾತೆಯಲ್ಲಿ ಕಾರ್ಯಕ್ರಮವನ್ನು ಲೈವ್ ಮಾಡಿದ್ದರು.

‘ಉತ್ತಮ ಆಡಳಿತ ದಿನ’ ಆಚರಣೆಯನ್ನು ಅಣಕಿಸಿದಂತೆ ಭಾಸವಾಗುವ ರೀತಿ ಕಮೆಂಟ್‌ಗಳು ದಾಖಲಾಗಿದ್ದವು. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಕಮೆಂಟ್‌ಗಳಾಗಿದ್ದವು. ಈ ಕುರಿತು ನಾನುಗೌರಿ.ಕಾಂ ವರದಿ ಮಾಡಿತ್ತು. (ವರದಿಯನ್ನು ಇಲ್ಲಿ ಓದಬಹುದು)


ಇದನ್ನೂ ಓದಿರಿ: ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...