Homeಕರ್ನಾಟಕ‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ಡಿ.ಕೆ.ಸುರೇಶ್‌ ಮತ್ತು ಅಶ್ವತ್ಥ್‌ ನಾರಾಯಣ್ ನಡುವಿನ ಗಲಾಟೆಯ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್‌ ನಾರಾಯಣ್ ಅವರ ನಡುವೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಮನಗರದ ಘಟನೆ ಒಬ್ಬ ಸಚಿವರ ದುರಹಂಕಾರದ ಪರಮಾವಧಿ. ಸಚಿವ ಅಶ್ವತ್ಥ್‌ ನಾರಾಯಣ ಅವರು ಮುಖ್ಯಮಂತ್ರಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ಮುಖ್ಯಮಂತ್ರಿಗಳಿರುವ ವೇದಿಕೆಯಲ್ಲಿ ಏನು ಮಾತನಾಡಬೇಕು, ಅವರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬ ಪರಿಜ್ಞಾನ ಇರಬೇಕು” ಎಂದು ತಿಳಿಸಿದರು.

ರಾಜಕಾರಣದಲ್ಲಿ ಜೈಕಾರ ಹಾಕುವವರು, ಧಿಕ್ಕಾರ ಕೂಗುವವರು, ಕಲ್ಲು, ಮೊಟ್ಟೆ, ಟೊಮೆಟೋ ಹೊಡೆಯುವವರು ಇರುತ್ತಾರೆ. ಯಾವುದೋ ಸನ್ನಿವೇಶದಲ್ಲಿ ದಲಿತರಿಗೆ ನೋವಾಗಿದ್ದು, ಅವರು ಘೋಷಣೆ ಕೂಗಿದ್ದಾರೆ. ಇಂತಹ ಘಟನೆಯನ್ನು ನಾವೂ ಎದುರಿಸಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಸಭೆಯನ್ನು ಹೇಗೆ ನಿಭಾಯಿಸಬೇಕು. ಸಿಎಂ ಬಂದ ಸಂದರ್ಭದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಕನಿಷ್ಟ ಜ್ಞಾನ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇರಬೇಕು. ಅವರಿಗೆ ಆ ಜ್ಞಾನ ಇಲ್ಲವೋ, ಸಮಯಪ್ರಜ್ಞೆ ಇಲ್ಲವೋ, ಇದು ಅವರ ಸಂಸ್ಕೃತಿಯೋ ಗೊತ್ತಿಲ್ಲ. ಇಲ್ಲಿ ಯಾವುದನ್ನೂ ಕತ್ತಲಲ್ಲಿ ಇಡಲು ಸಾಧ್ಯವಿಲ್ಲ ಎಂದರು.

ನನ್ನ ಸೋದರಿ ಅನಿತಾ ಅವರ ಮನಸಿಗೂ ನೋವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಕೂಡ ಆ ರೀತಿ ಮಾತಾಡುವುದು ಬೇಡ, ನಿಲ್ಲಿಸು ಎಂದು ಆ ಸಚಿವರಿಗೆ ಸನ್ನೆ ಮಾಡುತ್ತಾರೆ. ಆದರೂ ಅವರು ನಿಲ್ಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡರು, ಎರಡು ಬಾರಿ ಕುಮಾರಸ್ವಾಮಿ ಅವರನ್ನು, 2 ಕಿ.ಮೀ. ದೂರದಲ್ಲಿನ ಎಸ್.ಎಂ. ಕೃಷ್ಣ ಅವರನ್ನು ಸಿಎಂ ಆಗಿ ಕೊಟ್ಟಂತಹ ಜಿಲ್ಲೆ. ಪ್ರತಿ ಮನೆಗೂ ರಾಜಕಾರಣ ಗೊತ್ತಿದೆ. ನಾವು ಅಶ್ವತ್ ನಾರಾಯಣ್ ಅವರಷ್ಟು ದೊಡ್ಡವರಲ್ಲ, ಎಳಸು ಇರಬಹುದು. ಆದರೆ ರಾಮನಗರ ಜಿಲ್ಲೆಯವರು ಅವರ ಬೆದರಿಕೆಗೆ ಹೆದರುವ ಮಕ್ಕಳಲ್ಲ ಎಂದು ಸ್ಪಷ್ಟಪಡಿಸಿದರು.

ಅವರು ಬಂದಿರುವುದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಕ್ಕೆ. ಅದನ್ನು ಮಾಡಿಸಿದ್ದು ಇವರಲ್ಲ. ಜಿಲ್ಲಾ ಮಂತ್ರಿಯಾಗಿದ್ದಾಗ ನಾನು ಹಾಗೂ ಎಲ್ಲರೂ ಸೇರಿ ನಿರ್ಮಾಣ ಮಾಡಿದ ಪ್ರತಿಮೆ ಎಂದು ಹೇಳಿದರು.

ಅವರು ಅವರ ಪಕ್ಷದ ವೇದಿಕೆಯಲ್ಲಿ ಏನು ಬೇಕಾದರೆ ಹೇಳಿಕೊಳ್ಳಲಿ. ಇದು ಸಿಎಂ ಅವರ ಸಭೆ. ಸಿಎಂ ಇಳಿಸಲು ಮೊದಲಿನಿಂದಲೂ ಬಿಜೆಪಿಯಲ್ಲಿ ಪ್ರಯತ್ನ ನಡೆಯುತ್ತಿದೆ. ಯಡಿಯೂರಪ್ಪನವರನ್ನು ಇಳಿಸಲು ದೊಡ್ಡ ಷಡ್ಯಂತ್ರ ಮಾಡಿದ್ದರು. ಈಗ ಬೊಮ್ಮಾಯಿ ಅವರನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರ ತೆಗೆದುಕೊಳ್ಳಿ, ಬೇರೆ ವಿಚಾರ ತೆಗೆದುಕೊಳ್ಳಿ ಎಂದು ನಮಗೆ ಮಾಹಿತಿ ಕೊಟ್ಟವರೇ ಬಿಜೆಪಿಯವರು, ಇದೇ ಅಶ್ವಥ್ ನಾರಾಯಣ್. ಈ ವಿಚಾರಗಳ ಬಗ್ಗೆ ಸಮಯ ಬಂದಾಗ ನಾವು ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು.

ಈಗಲೂ ಗುತ್ತಿಗೆದಾರರ ಕಮಿಷನ್ ವಿಚಾರ ಬಳಸಿಕೊಳ್ಳುತ್ತಿದ್ದಾರೆ. ಅವರ ಆಂತರಿಕ ಸಮಸ್ಯೆಗೆ ಮುಖ್ಯಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಅಪಮಾನ ಮಾಡಿದರೆ ಅದು ಸರಿಯೇ? ಮಾಡಲಿ ಬಿಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನಿತಕ್ಕ ಹಾಗೂ ಮುಖ್ಯಮಂತ್ರಿಗಳೇ ಅವರ ಮಾತು ಸರಿಯಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ಅದರ ಬಗ್ಗೆ ನಾನು ಹೇಳುವುದಾದರೂ ಏನಿದೆ. ಅವರ ಎಲ್ಲ ಸವಾಲುಗಳನ್ನು ಎದುರಿಸಲು ನಾವು ಸಿದ್ಧ ಎಂದರು.

ಇದು ಮುಖ್ಯಮಂತ್ರಿ, ಅವರ ಪಕ್ಷ, ಆರ್‌‌ಎಸ್‌ಎಸ್‌, ಜಿಲ್ಲಾಡಳಿತ, ಜಿಲ್ಲೆಯ ಜನರಿಗೆ ಆಗಿರುವ ಅಪಮಾನ. ಇಂಥವರು ಮಂತ್ರಿಯಾಗಿರುವುದೇ ದೊಡ್ಡ ಅವಮಾನ. ಅವರು ಯಾವ ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿ ಎಂದರೆ ಏನು ಎಂದು ನನಗೂ ತಿಳಿಸಲಿ. ನಾನು ಏಳು ಬಾರಿ ಶಾಸಕನಾಗಿದ್ದೇನೆ, ನನಗೂ ತಿಳಿಸಲಿ. ನಾಳೆ ಅವರೇ ಸಮಯ ನಿಗದಿ ಮಾಡಲಿ. ನಾವು ಬಂದು ತಿಳಿದುಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಅಂಬೇಡ್ಕರ್ ಪ್ರತಿಮೆ ಅವರು ನಿರ್ಮಿಸಿದರಾ? ಅವರೇನು ಆಣೆಕಟ್ಟು ಕಟ್ಟಿದ್ದಾರಾ? ನರೇಗಾ ಯೋಜನೆಯಲ್ಲಿ ಯಾವುದಾದರೂ ಊರಿನ ಅಂತರ್ಜಲ ಹೆಚ್ಚಿಸಿದ್ದಾರಾ? ಕಟ್ಟಡ ಕಟ್ಟಿದ್ದಾರಾ? ರಸ್ತೆ ಮಾಡಿಸಿದ್ದಾರಾ? ಶಾಲೆ ನಿರ್ಮಿಸಿದ್ದಾರಾ? ಅವರು ಒಂದು ದಿನ ನನ್ನ ಜತೆ ಮಾತನಾಡಿಲ್ಲ. ಯಾವುದೂ ಗೊತ್ತಿಲ್ಲ. 900 ಕೋಟಿ ರೂ. ಎಲ್ಲಿ ಕೊಟ್ಟಿದ್ದಾರೆ? ಸರ್ಕಾರದಿಂದ ಅನುದಾನ ಹೋಗುತ್ತಿದೆಯಾ, ಅದೂ ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ. ಅವರನ್ನು ವೈಯಕ್ತಿಕವಾಗಿ ನಾವು ಮೆಚ್ಚಿಕೊಳ್ಳುತ್ತೇವೆ. ಹಾಗೆಂದು ಅವರ ಸಮ್ಮುಖದಲ್ಲಿ ಮಂತ್ರಿಯೊಬ್ಬರು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಕೂರಲು ಸಾಧ್ಯವೇ? ನಮಗೂ ಸ್ವಾಭಿಮಾನ ಇದೆ. ವೇದಿಕೆ ಮೇಲೆ ಕೂರಿಸಿ ನೀವು ಗಂಡಸಾ ಎಂದು ಕೇಳಿದರೆ ಸುಮ್ಮನೆ ಕೂರಲು ಸಾಧ್ಯವೇ? ರಾಜಕೀಯ, ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಅವರಿಗೆ ಗೊತ್ತಿರಲಿ. ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಜನರ ರಕ್ತವೇ ಬೇರೆ ಎಂದು ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...