Homeಮುಖಪುಟರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

ರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

- Advertisement -
- Advertisement -

ಕೇರಳದ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ರಾತ್ರಿ ಮಾವೇಲಿ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಕರೊಬ್ಬರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತ ಪೊಲೀಸ್‌ ಅಧಿಕಾರಿಯನ್ನು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪ್ರಮೋದ್ ಎಂದು ಗುರುತಿಸಲಾಗಿದ್ದು, ಅವರು ಪ್ರಯಾಣಿಕರೊಬ್ಬರಿಗೆ ಕಪಾಳಕ್ಕೆ ಹೊಡೆದು, ಒದ್ದು ಪ್ರಯಾಣಿಕನನ್ನು ಕೆಳಗೆ ಬೀಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೈಲಿನಲ್ಲಿ ಪೊಲೀಸ್‌‌ ಅಧಿಕಾರಿಯೂ ಪ್ರಯಾಣಿಕನೊಂದಿಗೆ ಟಿಕೆಟ್ ಬಗ್ಗೆ ಪ್ರಶ್ನಿಸುತ್ತಾರೆ. ಈ ವೇಳೆ ಅವರು ಅದನ್ನು ಹುಡುಕುತ್ತಿರುವ ವೇಳೆ ಅಧಿಕಾರಿಯೂ ಅವರಿಗೆ ಕಪಾಳಕ್ಕೆ ಹೊಡೆಯುತ್ತಾರೆ. ಇದರ ನಂತರ ಪ್ರಯಾಣಿಕ ಕೆಳಗೆ ಕುಸಿಯುತ್ತಾರೆ, ಇಷ್ಟಕ್ಕೆ ಬಿಡದ ಅಧಿಕಾರಿ ಅವರನ್ನು ಕಾಲಿನಿಂದಲೂ ಒದೆಯುತ್ತಾರೆ.

ಇದನ್ನೂ ಓದಿ:ಕೊರಗರ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಏಕೆ ಸುಮ್ಮನಿದ್ದಾರೆ? -ಸಿಪಿಎಂ ಪ್ರಶ್ನೆ

ಸಹ ಪ್ರಯಾಣಿಕರ ಆಕ್ಷೇಪದ ನಡುವೆಯೂ ಅಧಿಕಾರಿಯೂ ಪ್ರಯಾಣಿಕರಿಗೆ ಥಳಿಸುತ್ತಲೇ ಇದ್ದರು. ಆದರೆ ಅಧಿಕಾರಿಯು ಪ್ರಯಾಣಿಕನಿಗೆ ಥಳಿಸುವಂತಹ ತಪ್ಪನ್ನು ಏನೂ ಮಾಡಿಲ್ಲ ಎಂದು ಸಹ ಪ್ರಯಾಣಿಕರು ಹೇಳಿದ್ದಾರೆ ಎಂದು ಮಾಧ್ಯಮಂ ವರದಿ ಮಾಡಿದೆ. ಇದರ ನಂತರ ಅಧಿಕಾರಿಯು ಪ್ರಯಾಣಿಕನನ್ನು ರೈಲಿನಿಂದ ಹೊರಕ್ಕೆ ಕಳುಹಿಸಿದ್ದಾರೆ.

ತನ್ನ ಕೃತ್ಯವನ್ನು ಪೊಲೀಸ್‌‌ ಅಧಿಕಾರಿ ಪ್ರಮೋದ್‌ ಸಮರ್ಥಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ರೀತಿ ವರ್ತಿಸದಿದ್ದರೆ ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ. ಕೇರಳದ ಕಣ್ಣೂರಿನ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಪ್ರಸ್ತುತ ಘಟನೆಗಳ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಪಿಣರಾಯಿ ವಿಜಯನ್ ಗೃಹ ಸಚಿವರಾಗಿದ್ದರೂ, ಪೊಲೀಸ್ ಪಡೆಯನ್ನು ಈಗ ಸಿಪಿಐಎಂ ನಿಯಂತ್ರಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಘಟನೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

“8 ವರ್ಷದ ಬಾಲಕಿಯೊಂದಿಗೆ ಮಹಿಳಾ ಪೊಲೀಸ್ ಅಧಿಕಾರಿ ಹೇಗೆ ಅನುಚಿತವಾಗಿ ವರ್ತಿಸಿದ್ದಾರೆಂದು ನಾವೆಲ್ಲರೂ ನೋಡುತ್ತಿದ್ದೇವೆ. ಪೊಲೀಸರಿಗೆ ಜನರ ಮೇಲೆ ಹಿಡಿತ ಸಾಧಿಸುವ ಹಕ್ಕಿಲ್ಲ. ಕಾನೂನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಬಹುದು, ಆದರೆ ಈ ರೀತಿಯಲ್ಲಿ ಒದೆಯುವುದರ ಮೂಲಕ ಅಲ್ಲ” ಎಂದು ಸತೀಶನ್ ಹೇಳಿದ್ದಾರೆ.

ಇದನ್ನೂ ಓದಿ:ಠಾಣೆಗೆ ನುಗ್ಗಿ ಪೊಲೀಸ್‌ ಸಮ್ಮುಖದಲ್ಲೆ AAP ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ BJP ಕಾರ್ಯಕರ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...