Homeಮುಖಪುಟಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

- Advertisement -
- Advertisement -

ದ್ವೇಷ ಭಾಷಣ ಮತ್ತು ಕೋಮುವಾದದ ವಿರುದ್ಧ ಸೋಮವಾರದಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಪ್ರಬಲ ಹೇಳಿಕೆ ನೀಡಿದ್ದಾರೆ. ಧರ್ಮವನ್ನು ಆಚರಿಸುವುದರಲ್ಲಿ ಯಾವುದೇ ತಪ್ಪಿಲ್ಲ, ಆದರೆ ಯಾವುದೇ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಬಾರದು ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬ ಭಾರತೀಯರಿಗೂ ಅವರ ನಂಬಿಕೆಯನ್ನು ಆಚರಣೆ ಮಾಡುವ ಹಕ್ಕಿದೆ ಎಂದು ಉಪರಾಷ್ಟ್ರಪತಿ ಪ್ರತಿಪಾದಿಸಿದ್ದಾರೆ.

ಅವರು ಕೇರಳದ ಕೊಟ್ಟಾಯಂ ಬಳಿಯ ಮನ್ನನಂನಲ್ಲಿ ನಡೆದ ಕೇರಳ ಕ್ಯಾಥೋಲಿಕ್ ಸಮುದಾಯದ ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. “ನಿಮ್ಮ ಧರ್ಮವನ್ನು ಆಚರಣೆ ಮಾಡಿ ಆದರೆ ದ್ವೇಷ ಭಾಷಣ ಮತ್ತು ಬರಹಗಳ ಮೂಲಕ ನಿಂದಿಸುವುದರಲ್ಲಿ ತೊಡಗಿಸಿಕೊಳ್ಳಬೇಡಿ” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಇದನ್ನೂ ಓದಿ:ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

ಎಲ್ಲಾ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ಆಚರಿಸುವ ಭಾರತೀಯ ಸಂಸ್ಕೃತಿಯ ಜಾತ್ಯತೀತ ಸ್ವರೂಪವನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಮತ್ತು ಆಚರಿಸಲು ಹಾಗೂ ಸೇವಾ ಮನೋಭಾವವನ್ನು ಶಾಲಾ ಹಂತದಿಂದಲೇ ಬೆಳೆಸುವಂತೆ ಉಪರಾಷ್ಟ್ರಪತಿ ಕರೆನೀಡಿದ್ದಾರೆ. ಜಾತ್ಯತೀತತೆ ಪ್ರತಿಯೊಬ್ಬ ಭಾರತೀಯನ ರಕ್ತದಲ್ಲಿದೆ ಮತ್ತು ದೇಶವು ತನ್ನ ಸಂಸ್ಕೃತಿ ಮತ್ತು ಪರಂಪರೆಗಾಗಿ ವಿಶ್ವಾದ್ಯಂತ ಗೌರವಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

“ವಾಸ್ತವವಾಗಿ, ಇತರರಿಗೆ ಹಂಚುವುದು ಮತ್ತು ಕಾಳಜಿಯ ತತ್ವವು ಭಾರತದ ಪ್ರಾಚೀನ ಸಂಸ್ಕೃತಿಯ ತಿರುಳಾಗಿದ್ದು, ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ನಮಗೆ, ಇಡೀ ಪ್ರಪಂಚವು ನಮ್ಮ ಕಾಲಾತೀತ ಆದರ್ಶವಾದ ‘ವಸುಧೈವ ಕುಟುಂಬಕಂ’ನಲ್ಲಿ ಒಳಗೊಂಡಿರುವ ಒಂದು ಕುಟುಂಬವಾಗಿದೆ. ಈ ಮನೋಭಾವದಿಂದ ನಾವು ಒಟ್ಟಾಗಿ ಮುನ್ನಡೆಯಬೇಕು” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ: ಭೀಮಾ ಕೋರೆಗಾಂವ್ ಹಿಂಸಾಚಾರ ಆರೋಪಿ ಮಿಲಿಂದ್ ವಿರುದ್ಧ ಎಫ್ಐಆರ್

ಕುರಿಯಕೋಸ್ ಎಲಿಯಾಸ್ ಚವರ ಮತ್ತು ಶ್ರೀ ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಕಾರ್ಯವನ್ನು ಶ್ಲಾಘಿಸಿದ ಅವರು, ಸಾಮಾಜಿಕ ಪ್ರಗತಿ ಮತ್ತು ಶೈಕ್ಷಣಿಕ ಸಬಲೀಕರಣದ ಕ್ಷೇತ್ರಗಳಲ್ಲಿ ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಹಿಂದುಳಿದ ಸಮುದಾಯಗಳ ಕ್ಷೇತ್ರಗಳಲ್ಲಿ ಕೇರಳದಿಂದ ಇತರ ರಾಜ್ಯಗಳು ಸ್ಫೂರ್ತಿ ಪಡೆಯಬಹುದು ಎಂದು ಹೇಳಿದ್ದಾರೆ.

ಹರಿದ್ವಾರ ಮತ್ತು ರಾಯ್‌ಪುರದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ ದ್ವೇಷ ಭಾಷಣಗಳು ಮತ್ತು ಕರ್ನಾಟಕದಲ್ಲಿ ಕ್ರಿಸ್‌ಮಸ್ ಆಚರಣೆಗಳ ಮೇಲೆ ನಡೆದ ದಾಳಿಗಳು ಸೇರಿದಂತೆ ದೇಶಾದ್ಯಂತ ಅಲ್ಪಸಂಖ್ಯಾತರ ಮೇಲೆ ನಡೆದ ವಿವಿಧ ದಾಳಿಗಳ ಹಿನ್ನಲೆಯಲ್ಲಿ ಅವರ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆಯನ್ನು ಹೊಂದಿವೆ.

ಇದನ್ನೂ ಓದಿ:ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...