HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...