HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...