HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...