HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...