Homeಮುಖಪುಟಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಗುಂಡೇಟು: ಆಸ್ಪತ್ರೆಗೆ ದಾಖಲು

- Advertisement -
- Advertisement -

2021ರ ನವೆಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಮೂಲಕ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತೆ ರೀತಾ ಯಾದವ್‌ರವರಿಗೆ ಸೋಮವಾರ ಸಂಜೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅವರನ್ನು ಸದ್ಯ ಸುಲ್ತಾನ್‌ಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

2021ರ ನವೆಂಬರ್ ತಿಂಗಳಿನಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಯೋಗಿ ಮುರ್ದಾಬಾದ್ ಎಂಬು ಘೋಷಣೆ ಕೂಗಿದ್ದ ರೀತಾ ಯಾದವ್ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಅವರು ಸೋಮವಾರ ಸಂಜೆ 6.30ರ ಸಮಯದಲ್ಲಿ ಪಕ್ಷದ ಕಚೇರಿಯಿಂದ ಮನೆಗೆ ತೆರಳಿದ್ದ ವೇಳೆ ಲಕ್ನೋ-ವಾರಣಾಸಿ ಚತುಷ್ಪತ ಹೆದ್ದಾರಿ ಸುಲ್ತಾನ್‌ಪುರದ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿದ್ದಾರೆ.

ರೀತಾ ಯಾದವ್‌ರವರು ತಮ್ಮ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ 3 ಜನ ಗೂಂಡಾಗಳು ಪಲ್ಸರ್ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿಯು ವಾಹನದಲ್ಲಿದ್ದ ಅವರ ಕಾಲಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ನಂತರ ಅವರ ಡ್ರೈವರ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರೀತಾ ಯಾದವ್ ಚಿಕಿತ್ಸೆ ಪಡೆಯುತ್ತಿದ್ದು ಅವರ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರೀತಾ ಯಾದವ್ ಪ್ರಕಾರ, “ದುಷ್ಕರ್ಮಿಗಳು ಯಾರು ಎಂಬುದನ್ನು ಪತ್ತೆ ಹಚ್ಚಲಾಗಿಲ್ಲ. ಅವರ ಕಾರು ಅಡ್ಡಗಟ್ಟಿ ಆಕ್ಷೇಪಾರ್ಹ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದರು. ನಂತರ ಡ್ರೈವರ್‌ಗೆ ಗನ್ ತೋರಿಸಿದಾಗ ನಾನು ಒಬ್ಬರ ಕಪಾಳಕ್ಕೆ ಹೊಡೆದೆ. ಆಗ ಆತ ಗುಂಡು ಹಾರಿಸಿ ಪರಾರಿಯಾದ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರೀತಾ ಯಾದವ್ 2021ರ ನವೆಂಬರ್ 16 ರಂದು ಪ್ರಧಾನಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದಾಗ ಬಂಧನಕ್ಕೊಳಗಾಗಿದ್ದರು. ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆರಂಭದಲ್ಲಿ ಸಮಾಜವಾದಿ ಪಕ್ಷದಲ್ಲಿದ್ದ ಅವರು ನಂತರ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷದ “ನಾನು ಹುಡುಗಿ, ನಾನು ಹೋರಾಡಬಲ್ಲೆ” ಅಭಿಯಾನದಲ್ಲಿ ಸಕ್ರಿಯರಾಗಿದ್ದರು. ಜಾನ್ಸಿಯಲ್ಲಿ ಡಿಸೆಂಬರ್‌ ನಲ್ಲಿ ನಡೆದ ಹೆಣ್ಣುಮಕ್ಕಳ ಬೃಹತ್ ಮ್ಯಾರಥಾನ್ ಆಯೋಜಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.


ಇದನ್ನೂ ಓದಿ: “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ದಾಳಿ ಕಂಡನಾರ್ಹ. ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು.

  2. ದೇಶದಲ್ಲಿ ವೈಚಾರಿಕ ಭಿನ್ನಮತವನ್ನು ವೈಚಾರಿಕವಾಗಿ ಎದುರಿಸಲಾಗದ ಪ್ರತಿಗಾಮಿ ಶಕ್ತಿಗಳು ಆಳುವ ವರ್ಗದ ಅಕ್ರಮ, ಅನ್ಯಾಯಗಳನ್ನು ಪ್ರಜಾತಾಂತ್ರಿಕ ವಿಧಾನದ ಮೂಲಕ ವಿರೋಧ ವ್ಯಕ್ತಪಡಿಸುವ ಪ್ರಜೆಗಳ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನದ ಅಂಗವಾಗಿ ತಮ್ಮ ಕಾಲಾಳುಗಳ ಮೂಲಕ ಈ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಇದು ಖಂಡನೀಯ, ಆದ್ದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಹಿತಬಯಸುವ ಪ್ರಜಾಸತ್ತೆಯ ಪರ ನಾಗರಿಕರು ಮತ್ತು ಸಂಘಟನೆಗಳು ಒಂದಾಗಿ ಹೋರಾಡುವ ಮೂಲಕ ದೇಶದ ಸಂವಿಧಾನದ ಆಶಯಗಳನ್ನು ರಕ್ಷಿಸಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...