Homeಕರ್ನಾಟಕ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಪಕ್ಷವು ಕರೆ ನೀಡಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಮಸೂದೆಯು ಭಾರತೀಯರಿಗೆ ಸಂವಿಧಾನವು ಕೊಡ ಮಾಡುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪ್ರತಿಪಾದಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ಪಕ್ಷದ 23ನೇ ರಾಜ್ಯ ಸಮ್ಮೇಳನವು ವಿವಾದಿತ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಿರ್ಣಯ ತೆಗೆದುಕೊಂಡಿದೆ.

ಕರ್ನಾಟಕ ವಿಧಾನ ಸಭೆಯಲ್ಲಿ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಈ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ತಿರಸ್ಕಾರಕ್ಕೆ ಒಳಗಾಗಬಹುದೆಂಬ ಆತಂಕದಿಂದ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಹೊರಟಿರುವುದನ್ನು ಸಮ್ಮೇಳನವು ತೀವ್ರವಾಗಿ ವಿರೋಧಿಸಿದೆ. ರಾಜ್ಯಪಾಲರು ಇದಕ್ಕೆ ಅನುಮತಿಯನ್ನು ನೀಡಬಾರದು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಇದನ್ನೂ ಓದಿ:ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಭಾರತದ ಸಂವಿಧಾನದ 25 ನೇ ಅನುಚ್ಛೇಧವು ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ದೇಶದ ಯಾವುದೇ ಪ್ರಜೆಯು ತನಗೆ ಇಷ್ಟ ಬಂದ ಮತಧರ್ಮವನ್ನು ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಹಾಗೆಯೇ ಯಾವುದೇ ವ್ಯಕ್ತಿಗೆ ಯಾವುದೇ ಮತಧರ್ಮವನ್ನು ಅನುಸರಿಸುವ, ಇಲ್ಲವೆ ಅನುಸರಿಸದೇ ಇರುವ ಸ್ವಾತಂತ್ರ್ಯ ಸಹ ಇರುತ್ತದೆ. ಇದು ಧಾರ್ಮಿಕ ಸ್ವಾತಂತ್ರ್ಯವಾಗಿದ್ದು ಈ ಧಾರ್ಮಿಕ ಹಕ್ಕು ದೇಶದ ಪ್ರತಿಪ್ರಜೆಯ ಮೂಲಭೂತ ಹಕ್ಕಾಗಿದೆ” ಎಂದು ಸಮ್ಮೇಳನದ ನಿರ್ಣಯ ವಿಶ್ಲೇಷಣೆ ಮಾಡಿದೆ‌.

“ರಾಜ್ಯ ಸರ್ಕಾರ ತಂದಿರುವ ಮಸುದೆಯೂ ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ದೌರ್ಜನ್ಯಕಾರಿ, ಸರ್ವಾಧಿಕಾರದ ಕ್ರಮವಾಗಿದೆ. ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ತರಲಾಗಿದೆ ಎಂದು ಸರಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಸಂವಿಧಾನದಲ್ಲಿ ಬಲವಂತದ ಮತಾಂತರವನ್ನು ತಡೆಯುವ ಮತ್ತು ಶಿಕ್ಷಿಸುವ ಅವಕಾಶ ಇರುವಾಗ ಮತ್ತೊಂದು ಕಾಯ್ದೆಯನ್ನು ತರುವುದರ ಔಚಿತ್ಯವಾದರೂ ಏನಿದೆ” ಎಂದು ರಾಜ್ಯ ಸಮ್ಮೇಳನವು ಪ್ರಶ್ನಿಸಿದೆ.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

“ಯಾವುದೇ ವ್ಯಕ್ತಿಯು ಮದುವೆಯ ನಂತರ ಮತ್ತು ಮದುವೆಯ ಮುಂಚೆ ಸಹ ಮದುವೆಯ ಕಾರಣಕ್ಕಾಗಿ ಮತಾಂತರ ಆಗುವುದನ್ನು ಸಹ ಈ ಕಾಯ್ದೆಯು ನಿರ್ಬಂಧಿಸುತ್ತದೆ. ಮದುವೆ ಮತ್ತು ಮತಧರ್ಮ ಪಾಲನೆಯು ಯಾವುದೇ ವ್ಯಕ್ತಿಯ ವೈಯುಕ್ತಿಕ ಹಕ್ಕಾಗಿದ್ದು, ಆಳುವ ಸರಕಾರಗಳಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ಕೊಡುವುದು ಎಂದರೆ ಸಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲತತ್ವಗಳನ್ನು ಮಣ್ಣುಪಾಲು ಮಾಡುವುದು ಎಂದೇ ಆಗುತ್ತದೆ. ವಯಸ್ಕ ಯುವಕ-ಯುವತಿಯರು ತಮ್ಮ ಆಯ್ಕೆಯಂತೆ ಮದುವೆ ಆಗುವುದನ್ನು ಮತ್ತು ಅಂತರ್ ಧರ್ಮೀಯ ಪ್ರೇಮ ವಿವಾಹಗಳಾಗುವುದನ್ನು ತಡೆಯುವ ದುರುದ್ದೇಶ ಈ ಕಾಯ್ದೆಯಲ್ಲಿ ಅಡಗಿದೆ

ಇದಲ್ಲದೇ ಮತಾಂತರದ ನೆಪದಲ್ಲಿ ಈ ವಿಷಯಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಸಹ ಮತ್ತೊಬ್ಬರ ಖಾಸಗಿ ವಿಷಯಗಳಲ್ಲಿ ತಲೆಹಾಕಲು ಮತ್ತು ದೂರುಕೊಡಲು ಈ ಕಾಯ್ದೆಯು ಅವಕಾಶ ಮಾಡಿಕೊಡುತ್ತದೆ. ಮತಾಂತರದ ಆರೋಪ ಹೊರಿಸಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಯಾವುದೇ ಅಲ್ಪಸಂಖ್ಯಾತ ಸಂಘ-ಸಂಸ್ಥೆಗಳಿಗೆ ಕಿರುಕುಳ ನೀಡಲು ಮತ್ತು ಸರಕಾರದ ಅನುದಾನವನ್ನು ತಡೆಹಿಡಿಯಲು ಬೇಕಾದಂತೆ ಕಾಯ್ದೆಯಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಲಾಗಿದೆ” ಎಂದು ಸಮ್ಮೇಳನವು ಟೀಕಿಸಿದೆ.

“ಸುಮಾರು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ ಮತ್ತು ಮಹಾವೀರರು ತಾವಿದ್ದ ಮತಧರ್ಮವನ್ನು ತಿರಸ್ಕರಿಸಿ ಹೊಸ ಮೌಲ್ಯಗಳ ಆಧಾರದ ಹೊಸ ಮತಧರ್ಮಗಳನ್ನು ಬೋಧಿಸಿದರು. ಗುರುನಾನಕರು ಸ್ಥಾಪಿಸಿದ ಸಿಖ್ ಧರ್ಮ ಸಹ ಜನರು ತಾವು ಇದ್ದ ಧರ್ಮವನ್ನು ತೊರೆದು ಹೊಸ ಧರ್ಮವನ್ನು ಸೇರಿದ್ದರಿಂದಲೇ ವ್ಯಾಪಕವಾಗಿ ಬೆಳೆದದ್ದು. ಹನ್ನೆರಡನೇ ಶತಮಾನದ ಶರಣರು ನೇರವಾಗಿ ಮತ್ತು ಸ್ಪಷ್ಟವಾಗಿ ಸಂಘಟಿತವಾಗಿ ಮತ್ತು ಸಾಮೂಹಿಕವಾಗಿ ಅಸಮಾನತೆಯ ವೈದಿಕ ಮತಧರ್ಮವನ್ನು ಖಂಡಿಸಿ ಹೊಸ ಧರ್ಮದ ಪ್ರತಿಪಾದಕರಾದರು. ಈಗ ಬಿಜೆಪಿ ತರುತ್ತಿರುವ ಕಾನೂನಿನ ಕಣ್ಣಲ್ಲಿ ಬುದ್ಧ-ಮಹಾವೀರ-ಗುರುನಾನಕರು-ಬಸವಣ್ಣನವರನ್ನು ಮತಾಂತರಿಗಳು ಎಂದು ದೂರುವುದು ಗಂಭೀರವಾದ ಪ್ರಮಾದವಾಗುತ್ತದೆ” ಎಂದು ರಾಜ್ಯ ಸಮ್ಮೇಳನ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

“ಹುಟ್ಟಿನಿಂದ ಬರುವ ಮತಧರ್ಮವು ಯಾವುದೇ ವ್ಯಕ್ತಿಯ ಸ್ವಂತ ಆಯ್ಕೆಯಲ್ಲ. ವ್ಯಕ್ತಿಗಳು ಬೆಳೆದು ವಯಸ್ಕರರಾದಾಗ ತಮಗೆ ಸರಿಕಂಡ ಮತಧರ್ಮವನ್ನು ಆರಿಸಿಕೊಳ್ಳುವ ಹಕ್ಕು ಅಥವಾ ಯಾವುದೇ ಮತಧರ್ಮವನ್ನು ಅನುಸರಿಸದಿರುವ ಹಕ್ಕು ಯಾವುದೇ ವ್ಯಕ್ತಿಗೆ ಇದ್ದೇ ಇದೆ. ಎಲ್ಲ ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರಗಳೂ ಮೂಲಭೂತ ಈ ಮಾನವ ಹಕ್ಕನ್ನು ಮಾನ್ಯ ಮಾಡಿವೆ ಮತ್ತು ಮಾನ್ಯ ಮಾಡಬೇಕಾಗುತ್ತದೆ.

ಅಲ್ಲದೇ ಯಾವುದೇ ಒಂದು ಧರ್ಮದಿಂದ ಜನರು ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು ಮತ್ತು ಧಾರ್ಮಿಕ ಪ್ರತಿಪಾದಕರು ತಮ್ಮ ಮತ ಧರ್ಮದಲ್ಲಿರುವ ದೋಷ, ಸಮಸ್ಯೆಗಳ ಕಡೆಗೆ ಗಮನ ನೀಡಿ ಅವುಗಳನ್ನು ನಿವಾರಿಸಬೇಕು. ಧಾರ್ಮಿಕ ಸುಧಾರಣೆಗಳನ್ನು ತಂದು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕೆ ಹೊರತು ಸರ್ವಾಧಿಕಾರಿ ಕಾನೂನುಗಳ ಮೂಲಕ ಅದನ್ನು ತರುವುದು ನ್ಯಾಯವಲ್ಲ. ಈ ಒಟ್ಟು ಹಿನ್ನೆಲೆಯಲ್ಲಿ ಈ ಬಲವಂತದ ಮತಾಂತರ ನಿಷೇಧದ ಹೆಸರಿನ ಈ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ ಕಾಯ್ದೆಯನ್ನು ವಾಪಸ್ ಪಡೆಯಬೇಕು. ರಾಜ್ಯಪಾಲರು ಇದಕ್ಕೆ ಅವಕಾಶವನ್ನು ನೀಡಕೂಡದು” ಎಂದು ಸಿಪಿಐ(ಎಂ) ರಾಜ್ಯ ಸಮ್ಮೇಳನವು ಆಗ್ರಹಿಸಿದೆ.

ಜೊತೆಗೆ, ಬಿಜೆಪಿ-ಸಂಘಪರಿವಾರದ ಹುನ್ನಾರಗಳನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಿಪಿಐ(ಎಂ) ಕರೆ ನೀಡಿದೆ.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...