Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...