Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...