Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...