Homeಮುಖಪುಟಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

- Advertisement -
- Advertisement -

2018ರ ಜನವರಿಯಲ್ಲಿ ಜಮ್ಮು ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬಾಲಕಿಯನ್ನು ಹತ್ಯೆ ಮಾಡಲಾಯಿತು. ಈ ಪ್ರಕರಣ ಸಂಬಂಧ ಶಿಕ್ಷೆಗೊಳಗಾಗಿದ್ದ ಪೊಲೀಸ್ ಅಧಿಕಾರಿಯ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದ್ದು ಸಂತ್ರಸ್ತ ಬಾಲಕಿಯ ಕುಟುಂಬ ಆತಂಕಕ್ಕೊಳಗಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ್ದಕ್ಕಾಗಿ ಸಬ್ ಇನ್ಸ್‌ಪೆಕ್ಟರ್ ಆನಂದ್ ದತ್ತಾ ಅವರನ್ನು ಶಿಕ್ಷೆಗೆ ಗುರಿಪಡಿಸಲಾಯಿತು. ಅಲ್ಲದೆ ಸೇವೆಯಿಂದ ವಜಾಗೊಳಿಸಲಾಯಿತು. ಘಟನೆಯ ವೇಳೆ ದತ್ತಾ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿದ್ದರು. ಅವರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು. ದತ್ತಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕಳೆದ ತಿಂಗಳು ಅಮಾನತುಗೊಳಿಸಲಾಯಿತು. ವೈಯಕ್ತಿಕ ಮತ್ತು ಭದ್ರತಾ ಬಾಂಡ್‌ಗಳನ್ನು ಒದಗಿಸಿದ ಮೇಲೆ ಅವರನ್ನು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಪ್ರಾಸಿಕ್ಯೂಷನ್ ಮಾಡಿರುವ ಆರೋಪಗಳು ಆಧಾರ ರಹಿತ ಎಂದು ದತ್ತಾ ಅವರ ವಕೀಲರು ನ್ಯಾಯಾಲಯದ ಮುಂದೆ ವಾದಿಸಿದ್ದಾರೆ.

ಪ್ರಕರಣದ ಮತ್ತೊಬ್ಬ ಅಪರಾಧಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ತಿಲಕ್ ರಾಜ್ ಅವರ ಶಿಕ್ಷೆಯನ್ನು ಡಿಸೆಂಬರ್ 16, 2021ರಂದು ನ್ಯಾಯಾಲಯವು ಅಮಾನತುಗೊಳಿಸಿತು. ದತ್ತಾ ಮತ್ತು ರಾಜ್ ಸೇರಿದಂತೆ ಮೂವರು ಆರೋಪಿಗಳು ಸಾಕ್ಷ್ಯ ನಾಶಪಡಿಸಿದ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಇಬ್ಬರು ಪೊಲೀಸರು ಅರ್ಧಕ್ಕಿಂತ ಹೆಚ್ಚು ಶಿಕ್ಷೆ ಅನುಭವಿಸಿದ್ದರು.

ಪಠಾಣ್‌ಕೋಟ್‌ನ ವಿಶೇಷ ನ್ಯಾಯಾಲಯವು ಇತರ ಮೂವರು ಆರೋಪಿಗಳಾದ ಸಂಜಿ ರಾಮ್, ದೀಪಕ್ ಖಜುರಿಯಾ ಮತ್ತು ಪರ್ವೇಶ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2018ರ ಜನವರಿ 17ರಂದು ಪ್ರಮುಖ ಆರೋಪಿ ಸಂಜಿ ರಾಮ್ ಅವರ ನಿವಾಸದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ವಿರೂಪಗೊಂಡ ಶವ ಪತ್ತೆಯಾಗಿತ್ತು. ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ರಾಷ್ಟ್ರಾವ್ಯಾಪಿ ಪ್ರತಿಭಟನೆಗಳು ಜರುಗಿದವು. ಅಂದಿನ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರವು ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಪ್ರಕರಣವನ್ನು ಜಮ್ಮುವಿನ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿತು.

ಘಟನಾ ಸ್ಥಳದಲ್ಲಿ ಸುಳ್ಳು ಪುರಾವೆಗಳನ್ನು ಸೃಷ್ಟಿಸುವ ಪ್ರಯತ್ನದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲು ಪೊಲೀಸರು ಅಪ್ರಾಪ್ತ ಸಂತ್ರಸ್ತೆಯ ಬಟ್ಟೆಗಳನ್ನು ತೊಳೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ತನ್ನ ತನಿಖೆಯಲ್ಲಿ ತಿಳಿಸಿದೆ.

“ಸ್ಥಳೀಯ ಅಂಗಡಿಯಿಂದ ಖರೀದಿಸಿದ ನಿದ್ರಾಜನಕಗಳ ಮೂಲಕ ಪ್ರಜ್ಞೆ ತಪ್ಪಿಸಿ ಬಾಲಕಿಯನ್ನು ರಸಾನಾದಲ್ಲಿನ ದೇವಸ್ಥಾನದಲ್ಲಿ ಕೆಲವು ದಿನಗಳ ಕಾಲ ಬಚ್ಚಿಟ್ಟು ಕ್ರೂರ ರೀತಿಯಲ್ಲಿ ಕತ್ತು ಹಿಸುಕಿ ಸಾಯಿಸಲಾಯಿತು” ಎಂದು ಅಪರಾಧ ವಿಭಾಗದ ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. “ಆರೋಪಿಗಳು ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ, ಆದರೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಾಕ್ಷ್ಯವನ್ನು ನಾಶಪಡಿಸಿದ್ದಾರೆ” ಎಂದು 15 ಪುಟಗಳ ಆರೋಪಪಟ್ಟಿ ಹೇಳಿದೆ.

ಬಾಲಾಪರಾಧಿ ಸೇರಿದಂತೆ ಎಂಟು ಜನರ ವಿರುದ್ಧ ಚಾರ್ಜ್ ಶೀಟ್ಅನ್ನು ಕ್ರೈಂ ಬ್ರಾಂಚ್ ಸಲ್ಲಿಸಿದೆ. ಬಾಲಾಪರಾಧಿಗಳ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ. ಯಾಕೆಂದರೆ ಅವರ ವಯಸ್ಸನ್ನು ನಿರ್ಧರಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇನ್ನೂ ವಿಚಾರಣೆ ನಡೆಸಬೇಕಿದೆ.

ದೇವಾಲಯದೊಳಗೆ ಅಪ್ರಾಪ್ತ ಬಾಲಕಿಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಂತರ, 2018 ರಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು ಮತ್ತು ಕಾಶ್ಮೀರದಿಂದ ಹೊರಗೆ ವರ್ಗಾಯಿಸಲು ಸೂಚಿಸಿತು. ಪಠಾಣ್‌ಕೋಟ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

“ಐದು ವರ್ಷಗಳ ಶಿಕ್ಷೆಯನ್ನು ಪೂರೈಸುವ ಮೊದಲು ಅವರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ನಾವು ಯಾವಾಗಲೂ ಒತ್ತಾಯಿಸುತ್ತೇವೆ” ಎಂದು ಸಂತ್ರಸ್ತ ಕುಟುಂಬ ಆಗ್ರಹಿಸಿದೆ.

ಈ ಜನರು (ಅಪರಾಧಿ ಪೊಲೀಸರು) ಈಗ ಹೊರಗಿದ್ದಾರೆ ಮತ್ತು ಅವರು ನಮಗೆ ಏನು ಬೇಕಾದರೂ ಮಾಡಬಹುದಾದ್ದರಿಂದ ನಾವು ಮತ್ತೆ ಬೆದರಿಕೆಯನ್ನು ಅನುಭವಿಸುತ್ತೇವೆ ಎಂದು ಕುಟುಂಬದ ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...