Homeಕರೋನಾ ತಲ್ಲಣವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

- Advertisement -
- Advertisement -

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಏರಿಕೆಯಾಗಿರುವುದರಿಂದ ಮಂಗಳವಾರ ಸಂಜೆ ಸಭೆ ನಡೆಸಲಾಗಿತ್ತು. ಮಂಗಳವಾರದಂದು 2,479 ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಜನವರಿ 1 ರಿಂದ ಬೆಂಗಳೂರಿನಲ್ಲಿ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ:ಕೊರೊನಾ ಪ್ರಕರಣದಲ್ಲಿ ಹೆಚ್ಚಳ: ಆಸ್ಪತ್ರೆಗಳು, ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಒಕ್ಕೂಟ ಸರ್ಕಾರ ನಿರ್ದೇಶನ

ಹೊಸ ನಿಯಮಗಳು ಹೇಗಿದೆ? ಯಾವುದಕ್ಕೆ ನಿರ್ಬಂಧ?

  • ಹೊಸ ಮಾರ್ಗಸೂಚಿ ಜನವರಿ 5 ರ ರಾತ್ರಿ 10 ಗಂಟೆಯಂದ 19 ರ ಬೆಳಿಗ್ಗೆ 5 ಗಂಟೆವರೆಗೆ ಇರಲಿದೆ.
  • ವೀಕೆಂಡ್‌ ಕರ್ಫ್ಯೂ‌ ಶುಕ್ರವಾರ ರಾತ್ರಿ 10 ಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಇರಲಿದೆ.
  • ರಾತ್ರಿ 10 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೆ ನೈಟ್‌ ಕರ್ಫ್ಯೂ. ಇದು ಜನವರಿ 19ರ ವರೆಗೆ ಮುಂದುವರೆಯಲಿದೆ.
  • ಎಲ್ಲಾ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲವಷ್ಟೇ ಕಾರ್ಯನಿರ್ವಹಣೆ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ.
  • ವೀಕೆಂಡ್ ಕರ್ಫ್ಯೂ ಇದ್ದರೂ ಅಗತ್ಯಕ್ಕೆ ತಕ್ಕಂತೆ ಸಾರಿಗೆಗಳು ಕಾರ್ಯ ನಿರ್ವಹಣೆ.
  • ಬೆಂಗಳೂರು ನಗರದಲ್ಲಿ ಮಾತ್ರ ಜನವರಿ 6 ರಿಂದ ನರ್ಸಿಂಗ್, ವೈದ್ಯಕೀಯ, ಪ್ಯಾರಾ‌ಮೆಡಿಕಲ್, 10, 11, 12 ನೇ ತರಗತಿಗಳನ್ನು ಹೊರತುಪಡಿಸಿ ಶಾಲಾ-ಕಾಲೇಜುಗಳು ಬಂದ್‌.
  • ಉಳಿದ ತರಗತಿಗಳು ಜನವರಿ 6 ರಿಂದಲೇ ಆನ್ಲೈನ್ ಮೂಲಕ ನಡೆಸಲು ಅನುಮತಿ.
  • ಪಬ್, ಕ್ಲಬ್ ಹೊಟೇಲ್ ಗಳು, ಚಿತ್ರಮಂದಿರ, ರಂಗಮಂದಿರ, ಆಡಿಟೋರಿಯಂಗಳಿಗೆ 50% ಮಾತ್ರ ಅವಕಾಶ. ಈ ಹಿಂದಿನ ನಿಯಮದಂತೆ ಡಬಲ್ ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ.
  • ಹೊರಾಂಗಣ ಮದುವೆಗಳಿಗೆ 200 ಜನ ಮತ್ತು ಒಳಾಂಗಣ ಮದುವೆಗಳಿಗೆ 100 ಜನರಿಗಷ್ಟೇ ಅನುಮತಿ.
  • ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ಇತರೆ ಯಾವುದೆ ಸೇವೆಗಳಿಗೆ ಅವಕಾಶ ಇಲ್ಲ.
  • ವ್ಯಾಕ್ಸಿನ್‌ ಹಾಕಿಸಿಕೊಂಡ ವ್ಯಕ್ತಿಗಳಿಗೆ ಮಾತ್ರ ಧಾರ್ಮಿಕ ಕೇಂದ್ರಗಳಲ್ಲಿ ಅವಕಾಶವಿದ್ದು, ಅದು ಕೂಡಾ ಒಮ್ಮೆಗೆ 50 ಭಕ್ತರಿಗೆ ಮಾತ್ರ ಅವಕಾಶ.
  • ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಮಾಲ್, ಷಾಪಿಂಗ್ ಕಾಂಪ್ಲೆಕ್ಸ್, ಅಂಗಡಿ ಮುಂಗಟ್ಟುಗಳಿಗೆ ಅನುಮತಿ.
  • ಈಜುಕೊಳ, ಜಿಮ್‌ಗಳಲ್ಲಿ 50% ಸಾಮರ್ಥ್ಯದೊಂದಿಗೆ ಅನುಮತಿ ಇದ್ದು, ಎರಡು ಡೋಸ್ ಲಸಿಕೆ ಕಡ್ಡಾಯ ಪಡೆದಿರಬೇಕು.
  • ಯಾವುದೇ ರ್‍ಯಾಲಿ, ಪ್ರತಿಭಟನೆಗಳಿಗೆ ಅನುಮತಿಯಿಲ್ಲ.
  • ಸಭೆ, ಸಮಾರಂಭಗಳನ್ನು 50 ಜನರೊಂದಿಗೆ ಮಾತ್ರ ನಡೆಸಲು ಅನುಮತಿ.

ಇದನ್ನೂ ಓದಿ:ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಈ ಮಧ್ಯೆ, ರಾಜ್ಯ ಸರ್ಕಾರವು ಕೇರಳ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಯಲ್ಲಿ ತೀವ್ರ ನಿಗಾ ಇಡಬೇಕು ಎಂದು ನಿರ್ದೇಶಿಸಿದೆ.

ರಾಜ್ಯ ಕಂದಾಯ ಸಚಿವ ಆರ್ ಅಶೋಕ ಮಾತನಾಡಿ, “ಹೊಸ ವರ್ಷದ ನಂತರ ಗೋವಾದಿಂದ ಹಿಂದಿರುಗಿದ ಅನೇಕ ಜನರಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಜನವರಿ 1ರ ನಂತರ ಗೋವಾದಿಂದ ಹಿಂದಿರುಗಿದ ಪ್ರತಿಯೊಬ್ಬರನ್ನು ಪತ್ತೆಹಚ್ಚಲು ನಾವು ನೋಡುತ್ತಿದ್ದೇವೆ. ಅವರನ್ನು ಪರೀಕ್ಷಿಸಲಾಗುವುದು. ಹೆಚ್ಚಿನ ಅಪಾಯವಿರುವ ದೇಶಗಳ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ, RT-PCR ಪರೀಕ್ಷೆಯನ್ನು ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...