Homeಕೊರೊನಾದೇಶದಲ್ಲಿ ಒಂದೇ ದಿನ 58,097 ಕೊರೊನಾ ಪ್ರಕರಣಗಳು: ಶೇ 55 ರಷ್ಟು ಏರಿಕೆ

ದೇಶದಲ್ಲಿ ಒಂದೇ ದಿನ 58,097 ಕೊರೊನಾ ಪ್ರಕರಣಗಳು: ಶೇ 55 ರಷ್ಟು ಏರಿಕೆ

- Advertisement -
- Advertisement -

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಮಂಗಳವಾರ ವರದಿಯಾಗಿದ್ದ 37,379 ಪ್ರಕರಣಗಳಿಗಿಂತ ಶೇಕಡಾ 55 ರಷ್ಟು ಹೆಚ್ಚಾಗಿದೆ.

ಇದರೊಂದಿಗೆ ದೇಶದಲ್ಲಿ 2,135 ಓಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 653 ಪ್ರಕರಣಗಳು, ದೆಹಲಿಯಲ್ಲಿ 464 ಓಮಿಕ್ರಾನ್ ಪ್ರಕರಣಗಳಿವೆ.

ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 15,389 ಜನರು ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಲಸಿಕೆ ಅಭಿಯಾನವನ್ನು ನಿರಂತರವಾಗಿ ವೇಗಗೊಳಿಸಲಾಗುತ್ತಿದ್ದು, 15 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕಲಾಗುತ್ತಿದೆ.

ಇದನ್ನೂ ಓದಿ: ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಹೊಸ ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಅಪಾಯವನ್ನು ಹೆಚ್ಚಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಹಲವಾರು ರಾಜ್ಯಗಳು ನೈಟ್ ಕರ್ಫ್ಯೂನಂತಹ ನಿರ್ಬಂಧಗಳನ್ನು ಘೋಷಿಸಿವೆ.

ರಾಜ್ಯ ಸರ್ಕಾರವು ಸಹ ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಮಂಗಳವಾರದಂದು ರಾಜ್ಯದಲ್ಲಿ 2,479 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಜನವರಿ 1 ರಿಂದ ಬೆಂಗಳೂರಿನಲ್ಲಿ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...