Homeಕರ್ನಾಟಕಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

- Advertisement -
- Advertisement -

2023 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸದ್ಯದಲ್ಲೇ ಸಚಿವ ಸಂಪುಟ ಪುನರ್‍ರಚನೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಇದರ ಜೊತೆಜೊತಗೆ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಬಗ್ಗೆಗಿನ ಸುದ್ದಿಗಳು ಕೂಡಾ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಹೊಸ ಸಚಿವ ಸಂಪುಟದಲ್ಲಿ 10ಕ್ಕೂ ಹೆಚ್ಚು ಹೊಸ ಮತ್ತು ಯುವ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಡಿದೆ. ಬಿಜೆಪಿಯು ಇದೇ ತಂತ್ರವನ್ನು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅನುಸರಿಸಿತ್ತು.

ಮೂಲಗಳ ಪ್ರಕಾರ, ಈ ವಾರದ 8-9 ಕ್ಕೆ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನಿಗದಿಯಾಗಿತ್ತು. ಆದರೆ ಇದೀಗ ಅದು ರದ್ದಾಗಿದ್ದು, ಜನವರಿ 18-19 ರ ವೇಳೆಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

“ಅಮಿತ್‌ ಶಾ ಅವರ ಸಭೆಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೊದಲನೆಯದಾಗಿ ಸಂಪುಟ ಪುನರ್‍ರಚನೆ, ಎರಡನೆಯದ್ದಾಗಿ ಮುಖ್ಯಮಂತ್ರಿ ಬದಲಾವಣೆ, ಮೂರನೆಯದ್ದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ. ಈ ಸಭೆಯಲ್ಲಿ ಸಂಪುಟ ಪುನರ್‍ರಚನೆ ಬಗ್ಗೆ ಒಪ್ಪಿಗೆ ಸಿಕ್ಕರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇಲ್ಲವೆಂದರೆ ಮುಖ್ಯಮಂತ್ರಿ ಬಲದಲಾವಣೆ ಸಾಧ್ಯತೆ ಇದೆ” ಎಂದು ಮೂಲವೊಂದು ನಾನುಗೌರಿ.ಕಾಂಗೆ ಹೇಳಿದೆ.

ಒಟ್ಟಿನಲ್ಲಿ ಬಿಜೆಪಿಯ ಎಲ್ಲಾ ರಾಜಕೀಯ ಬದಲಾವಣೆಗಳು ಸಂಕ್ರಾಂತಿ ಹಬ್ಬದ ನಂತರ ನಿರೀಕ್ಷಿಸಲಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್‍ರಚನೆ ನಡೆದರೆ 2023 ರ ಚುನಾವಣೆಯವರೆಗೆ ಬೊಮ್ಮಾಯಿ ಅವರ ಸ್ಥಾನ ಭದ್ರವಾಗಿ ಇರಲಿದೆ ಎಂದು ಮೂಲಗಳು ಹೇಳುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ಹಿನ್ನಲೆಯಲ್ಲಿ ಈ ಎಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಪಕ್ಷದ ಸಂಘಟನೆ ಬಗ್ಗೆ ನಿಷ್ಕ್ರಿಯವಾಗಿರುವ ಸಚಿವರನ್ನು ವಜಾಗೊಳಿಸಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ. ಸಿಎಂ ವಿರುದ್ಧ ಇರುವ ಕೆಲವು ಹಿರಿಯ ಸಚಿವರನ್ನೂ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಡೆಕ್ಕನ್‌ ಹೆರಾಲ್ಡ್‌ ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಇತ್ತೀಚೆಗೆ ನಡೆದ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಒಬ್ಬ ಹಿರಿಯ ಸಚಿವನಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು. ಇಷ್ಟೇ ಅಲ್ಲದೆ ವಿರೋಧ ಪಕ್ಷದ ನಾಯಕರೊಂದಿಗೆ ‘ಹೊಂದಾಣಿಕೆ’ ಇರುವ ಮಂತ್ರಿಗಳ ಬಗ್ಗೆ ಕೂಡಾ ಕೇಂದ್ರ ನಾಯಕತ್ವವು ಅತೃಪ್ತಿಯಲ್ಲಿದೆ ಎಂದು ಮೂಲಗಳು ಹೇಳುತ್ತವೆ ಎಂದು DH ವರದಿ ಮಾಡಿದೆ.

“ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೊನೆವರೆಗೂ ಯಾರೂ ಬಿಟ್ಟುಕೊಡುವುದಿಲ್ಲ. ಯಾಕೆಂದರೆ ಒಂದು ವೇಳೆ ಅದು ಬಹಿರಂಗವಾದರೆ ಆಡಳಿತ ಯಂತ್ರ ಕುಸಿದು ಬಿದ್ದು, ಮುಖ್ಯಮಂತ್ರಿಯ ಅಧಿಕಾರಕ್ಕೆ ಮನ್ನಣೆ ಸಿಗುವುದಿಲ್ಲ, ಹೀಗಾಗಿ ಕೊನೆವರೆಗೂ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಕಳೆದ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಾಗ ಕೂಡಾ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೊನೆವರೆಗೂ ಸಿಎಂ ಬದಲಾವಣೆ ಇಲ್ಲ ಎಂದೇ ಹೇಳಿದ್ದರು. ಆದರೆ ಕೊನೆಗೆ ಸಿಎಂ ಬದಲಾವಣೆ ಆಗಿತ್ತಲ್ಲವೇ” ಎಂದು ನಾನುಗೌರಿ.ಕಾಂ ಜೊತೆ ರಾಜಕೀಯ ವಿಶ್ಲೇಷಕರೊಬ್ಬರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷವು ತನ್ನ ಸ್ಥಾನವನ್ನು ಹೆಚ್ಚಿಸಲು ಉತ್ಸುಕವಾಗಿರುವುದರಿಂದ, ಪ್ರಾದೇಶಿಕ ಅಸಮತೋಲನದ ಬಗ್ಗೆ ಎದ್ದಿರುವ ಆರೋಪಗಳನ್ನು ಪರಿಹರಿಸಲು ಸಂಪುಟ ಪುನರ್‍ರಚನೆಗೆ ಪ್ರಯತ್ನಿಸುತ್ತಿದೆ. ಇದಲ್ಲದೆ, ಸತತ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಸಮುದಾಯಗಳ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ DH ವರದಿ ತಿಳಿದೆ.

ಇದನ್ನೂ ಓದಿ:ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...