Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...