Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...