Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...