Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...