Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...