Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...