Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...