Homeಮುಖಪುಟಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

- Advertisement -
- Advertisement -

ಪಂಜಾಬ್‌ ರೈತರು ಗೋ ಬ್ಯಾಕ್ ಮೋದಿ ಎಂಬ ಘೋಷಣೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಫ್ಲೈ ಓವರ್‌ ಮೇಲೆಯೇ 15 ರಿಂದ 20 ನಿಮಿಷ ಕಾಲ ಪ್ರಧಾನಿ ನರೇಂದ್ರ ಮೋದಿಯವರು ಸಿಲುಕಿಕೊಂಡರು. ಬಳಿಕ ಫಿರೋಜ್‌ಪುರದ ರ್‍ಯಾಲಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಭ್ ಭೇಟಿಗೆ ಮೊದಲಿನಿಂದಲೂ ರೈತರು ವಿರೋಧ ವ್ಯಕ್ತಪಡಿಸಿದ್ದರು. ಎರಡು ವರ್ಷಗಳ ನಂತರ ರಾಜ್ಯಕ್ಕೆ ಇದು ಮೋದಿಯವರ ಮೊದಲ ಭೇಟಿಯಾಗಿತ್ತು. ಪಾಕಿಸ್ತಾನದ ಗಡಿಯಲ್ಲಿರುವ ಫಿರೋಜ್‌ಪುರಕ್ಕೆ ಪ್ರಮುಖ ಧಾರ್ಮಿಕ ಕೇಂದ್ರಗಳು ಮತ್ತು ಮೂರು ಆರೋಗ್ಯ ಸಂಸ್ಥೆಗಳಿಗೆ ಹೋಗಲು ಸಹಾಯಕವಾಗುವ ಮೆಗಾ ರೋಡ್ ಕಾರಿಡಾರ್‌ಗಳು ಸೇರಿದಂತೆ 42,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.

ಮೋದಿ ಆಗಮನದ ಸುದ್ದಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ #GoBackModi #FarmersProtest ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಲು ಶುರುವಾಗಿದ್ದವು.

ಪಂಜಾಬ್‌ನ ಫಿರೋಜ್‌ಪುರದಲ್ಲಿ ಇಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರ್‍ಯಾಲಿಯನ್ನು “ಕೆಲವು ಕಾರಣಗಳಿಗಾಗಿ” ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಹೇಳಿದರು. 15-20 ನಿಮಿಷ ಪ್ರಧಾನಿ ಮೋದಿ ಫ್ಲೈ ಓವರ್‌ ಮೇಲೆ ಅಷ್ಟು ಹೊತ್ತು ಸಿಲುಕಿಕೊಳ್ಳಲು ರಾಜ್ಯ ಸರ್ಕಾರದ ಭದ್ರತಾ ಲೋಪವೇ ಕಾರಣ ಎಂದು ಗೃಹ ಸಚಿವಾಲಯ ಆರೋಪಿಸಿತು.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ತಂದೆ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಂಪುಟದಿಂದ ವಜಾಗೊಳಿಸದೇ ಇರುವುದು, ರೈತರ ಮೇಲೆ ಎಫ್‌ಐಆರ್‌ ದಾಖಲಿಸಿರುವುದು, ಎಂಎಸ್‌ಪಿ ಕಾನೂನು ಶೀಘ್ರ ಜಾರಿ ಮಾಡದಿರುವುದು ಸೇರಿದಂತೆ ಹಲವು ಘಟನೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ನಾಯಕರು ‘ಭದ್ರತಾ ಲೋಪ’ ಎಂಬುದನ್ನೇ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಖಾಲಿ ಕುರ್ಚಿಗಳು ಹರಿದಾಡಿವೆ. ಈ ಫೋಟೋಗಳನ್ನು ಕಿಸಾನ್‌ ಏಕ್ತಾ ಮೋರ್ಚಾ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಮೋದಿ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು ರಾರಾಜಿಸಿವೆ ಎಂದು ನೆಟ್ಟಿಗರು ವ್ಯಂಗ್ಯ ಮಾಡಿ, ‘ಇದೇ ಭದ್ರತಾ ಲೋಪ’ ಎಂದಿದ್ದಾರೆ.

ಇದರ ಜೊತೆಗೆ ರೈತ ಚಳವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರೊಂದಿಗೆ ಕಟುವಾಗಿ ವರ್ತಿಸಿದ ಚಿತ್ರಗಳನ್ನು ಅನೇಕರು ಹಂಚಿಕೊಂಡಿದ್ದಾರೆ. ಬಿಜೆಪಿ ನಾಯಕರು ‘ಕಾಂಗ್ರೆಸ್‌’ ಪಕ್ಷವನ್ನು ದೂಷಿಸುತ್ತಿದ್ದರೂ ರೈತರ ಹೋರಾಟವನ್ನು ಪ್ರಸ್ತಾಪಿಸುತ್ತಿಲ್ಲ. ಆದರೆ ನೆಟ್ಟಿಗರು ರೈತರ ಹೋರಾಟವನ್ನು ನೆಪಿಸುತ್ತಿರುವುದನ್ನು ಕಾಣಬಹುದು.

ಬರಹಗಾರ್ತಿ ಗಾಯತ್ರಿ ಎಚ್‌.ಎನ್‌. ಹೀಗೆ ಬರೆದಿದ್ದಾರೆ: “ಮೇಘಾಲಯದ ಹಾಲಿ ರಾಜ್ಯಪಾಲ ಹಾಗೂ ಹಿರಿಯ ಬಿಜೆಪಿ ನಾಯಕ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಮಂತ್ರಿ ಮೋದಿಯವರು “ರೈತರೇನು ನಮಗಾಗಿ ಸತ್ತರೇ?” ಅಂದುಬಿಟ್ಟರು ಅನ್ನುತ್ತಾ, ಈ ಬಗ್ಗೆ ಅಮಿತ್ ಷಾ`ಗೆ ಹೇಳಿದಾಗ ಅವರು “ಅವನಿಗೆ ತಲೆ ತಿರುಗಿದೆ, ನೀವೇನೂ ಯೋಚನೆ ಮಾಡಬೇಡಿ” ಅನ್ನುವರ್ಥದಲ್ಲಿ ಮಾತಾಡಿದರು ಎಂದು ಮೋದಿಯನ್ನು ದೂರಿಕೊಂಡ (ಅದೇವೇಳೆಗೆ ಷಾ`ರನ್ನು ಒಪ್ಪವಿಟ್ಟುಕೊಂಡ) ವಿಡಿಯೋ ತುಣುಕು ಮೊನ್ನೆ ಮೊನ್ನೆ ಸಖತ್ ವೈರಲ್ ಆಯಿತು. ಅದರ ಬೆನ್ನಲ್ಲೇ ಇವತ್ತು ಪಂಜಾಬಿನಲ್ಲಿ ‘ಭದ್ರತಾ ಲೋಪ’ದ ಸುದ್ದಿ ಬಂದಿದೆ. ಇದ್ದಕ್ಕಿದ್ದ ಹಾಗೇ ಬಿಜೆಪಿಯ ಹಿರಿತಲೆಯೊಂದು ಮೋದಿ ವಿರುದ್ಧ ಬಹಿರಂಗವಾಗಿ ಮಾತಾಡಿದ್ದು, ಅಮಿತ್‌ಷಾರನ್ನು ಒಪ್ಪ ಇಟ್ಟುಕೊಂಡಿದ್ದು ಟ್ರೋಲ್ ಮಾಡಿ ಬಿಸಾಡುವ ಸಂಗತಿ ಅಲ್ಲವೇ ಅಲ್ಲ. ಅದು ಮೋದಿಗೆ ಅದರ ಸಾಕುತಾಯಿ ಕೊಟ್ಟ ಸ್ಪಷ್ಟ ಸಂದೇಶವಾಗಿರಬಹುದು. ನೀನು ಎಷ್ಟು ಜನಪ್ರಿಯನಾದರೂ ಎಷ್ಟು ಭಕ್ತರನ್ನು ಬೆಳೆಸಿದರೂ ನಿನ್ನ ಜುಟ್ಟು ನಮ್ಮ ಕೈಲಿದೆ ಅನ್ನುವ ಎಚ್ಚರಿಕೆಯಾಗಿರಬಹುದು. ಇದೇ ಹಿನ್ನೆಲೆಯಲ್ಲಿ ಇವತ್ತಿನ ಭದ್ರತಾಲೋಪವನ್ನೂ ನೋಡುವ ಮನಸಾಗುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಇದಕ್ಕೆ ಹೊಣೆಗಾರರೇನೋ ಹೌದು. ಆದರೆ ಚುನಾವಣೆಗೆ ಎದುರಾಗಿ ರಾಜ್ಯದ ಮುಖ್ಯಮಂತ್ರಿಯೊಬ್ಬರು ಇಂಥಾ ಮೂರ್ಖತನ ಮಾಡಲಾರರು ಎಂದೇ ಬಲವಾಗಿ ಅನಿಸುತ್ತಿದೆ. ಆದರೂ ಹೀಗಾಗಿದೆ ಅಂದರೆ ಇದರ ಒಳಮರ್ಮ ಏನೋ ಗಹನವಾದ್ದೇ ಇರಬೇಕು. ಮತ್ತು, ಅದು ನೇರವಾಗಿ ಮೋದಿ ಮತ್ತವರ ಪಕ್ಷಕ್ಕೆ ಸಂಬಂಧಿಸಿದ್ದಿರಬೇಕು. ಎಷ್ಟೆಂದರೂ ಇದು ರಾಜಕಾರಣ. ಕೆಲಸ ಮುಗಿದ ಮೇಲೆ ಆಯುಧವನ್ನು ಮುರಿದು ಬಿಸಾಡುವುದು ಹಳೇಹಪ್ಪಟ್ಟು ರಾಜನೀತಿ. ನನಗೇಕೋ ಆ ವ್ಯಕ್ತಿ, ಸಂಸ್ಥೆಯೊಂದರ ಅಜೆಂಡಾ ಸಾಕಾರಗೊಳಿಸುವ ಸಂಚಿಗೆ ಬಳಕೆಯಾದ ಹೆಡ್ಡನಂತೆ ಕಾಣತೊಡಗಿದ್ದಾರೆ”

ಸಿನಿಮಾ ವಿಮರ್ಶಕ ಹರಿಪರಾಕ್‌ ಹೀಗೆ ಬರೆದಿದ್ದಾರೆ:

ಯುವಬರಹಗಾರ ಭುವನ್‌ ಅವರು ರೈತ ಹೋರಾಟದ ಚಿತ್ರವನ್ನು ಹಂಚಿಕೊಂಡು ಇಂದಿನ ಘಟನೆಯನ್ನು ವಿಶ್ಲೇಷಿಸಿದ್ದಾರೆ.

ಚಿತ್ರ 1: ಒಕ್ಕೂಟ ಸರ್ಕಾರ ಜಾರಿ ತರಲು ಹೊರಟಿದ್ದ 3 ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರನ್ನು ತಡೆಯಲು ಸರ್ಕಾರ ರಸ್ತೆಯಲ್ಲಿ ಮೊಳೆಗಳನ್ನು ನೆಟ್ಟಿತು. ಚಿತ್ರ 2:ಪಂಜಾಬ್ ರೈತರಿಂದ ರಸ್ತೆ ತಡೆ, ಫ್ಲೈ ಓವರ್ ನಲ್ಲಿ ಸುಮಾರು 15 ಕ್ಕೂ ಹೆಚ್ಚು ನಿಮಿಷ ಸಿಲುಕಿ, ಫಿರೋಜ್ಹ್ ಪುರ ರ್ಯಾಲಿ ರದ್ದು ಗೊಳಿಸಲಾಯಿತು.

ಎನ್‌.ಎಸ್‌.ಆರ್‌. ಅವರು “ಪಂಜಾಬಿನ ಜನತೆ ಮೋದಿಯವರ ಇಂದಿನ ಚುನಾವಣೆ ರ್‍ಯಾಲಿ ರದ್ದು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿಯಲ್ಲಿ ರೈತರು ಒಂದು ವರ್ಷ ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೆ ಕೂತಿದ್ದಾಗ ಅವರನ್ನು ಭೇಟಿಯಾಗಿ ಏನ್ ನಿಮ್ಮ ಸಮಸ್ಯೆ ಎಂದು ವಿಚಾರಿಸದೆ ಈಗ ಪಕ್ಷದ ಪರವಾಗಿ ಮತ ಕೇಳಲು ಹೋಗುವುದು ಹಾಸ್ಯಾಸ್ಪದವಾಗಿದೆ. ಪ್ರಧಾನಿ ಹುದ್ದೆಯಲ್ಲಿರುವವರು ಪಕ್ಷದ ಅಧ್ಯಕ್ಷರ ಹಾಗೆ ಸದಾಕಾಲವೂ ಒಂದಿಲ್ಲೊಂದು ರಾಜ್ಯದ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವುದು ಸರಿಯಲ್ಲ” ಎಂದು ಪೋಸ್ಟ್‌ ಮಾಡಿದ್ದಾರೆ.

ಚಿಂತಕ ಕೆ.ಎಲ್‌.ಚಂದ್ರಶೇಖರ್‌ ಐಜೂರು ಅವರು ಪಿ.ಲಂಕೇಶ್ ಅವರ ನೀಲು ಕಾವ್ಯದ ಸಾಲುಗಳನ್ನು ಹಂಚಿಕೊಂಡು ಇಂದಿನ ಘಟನೆಯನ್ನು ವಿಮರ್ಶಿಸಿದ್ದಾರೆ.

“ಚಪ್ಪಾಳೆಗಳ ಸ್ಫೂರ್ತಿಯಿಂದ ಹುಟ್ಟಿದ ನಾಯಕಚಪ್ಪಾಳೆಗಳ ನಡುವೆಯೇ ಹೀನಾಯವಾಗಿಸಾಯುವನು”-ನೀಲು

ಅನೇಕರು ವ್ಯಂಗ್ಯ ಮಾಡಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿರಿ: ನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...