Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...