Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...