Homeಕೊರೊನಾ’ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

’ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

- Advertisement -
- Advertisement -

ಬಿಹಾರದ ಮಾಧೇಪುರ ಜಿಲ್ಲೆಯ ಬ್ರಹ್ಮದೇವ್ ಮಂಡಲ್‌ನ 84 ವರ್ಷದ ವೃದ್ಧರೊಬ್ಬರು ಕೋವಿಡ್ ಲಸಿಕೆಯ 11 ಡೋಸ್‌ಗಳನ್ನು ಪಡೆದಿರುವುದಾಗಿ ಹೇಳಿಕೊಂಡಿದ್ದು, ರಾಜ್ಯ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಮಾಧೇಪುರ ಜಿಲ್ಲೆಯ ಓರೈ ಗ್ರಾಮದ ನಿವಾಸಿ ಬ್ರಹ್ಮದೇವ್ ಮಂಡಲ್, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ನೇ ಬಾರಿಗೆ ಲಸಿಕೆ ಪಡೆಯಲು ಬಂದಾಗ ಸಿಕ್ಕಿಬಿದ್ದಿದ್ದಾರೆ. ಕೋವಿಡ್ ಲಸಿಕೆಗಳಿಗಾಗಿ ಅವರು ತಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಫೋನ್ ಸಂಖ್ಯೆಯನ್ನು ಎಂಟು ಬಾರಿ ಮತ್ತು ಮತದಾರರ ಗುರುತಿನ ಚೀಟಿ ಮತ್ತು ಅವರ ಪತ್ನಿಯ ಮೊಬೈಲ್ ಸಂಖ್ಯೆಯನ್ನು ಮೂರು ಬಾರಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

“ಲಸಿಕೆ ತುಂಬಾ ಪ್ರಯೋಜನಕಾರಿಯಾಗಿದೆ. ಸೊಂಟದ ನೋವಿನಂತಹ ಸಮಸ್ಯೆಗಳು ಹೋಗಿವೆ. ನನಗೆ ಈಗ ಹೆಚ್ಚು ಆಮ್ಲಜನಕ (ಸ್ಯಾಚುರೇಶನ್) ಇದೆ. ನಾನು ಇನ್ನು ಮುಂದೆ ಕೆಮ್ಮು ಅಥವಾ ಶೀತದಿಂದ ಬಳಲುವುದಿಲ್ಲ. ಇತರರು ಯಾಕೆ ಹೆಚ್ಚು ಹೆಚ್ಚು ಡೋಸ್‌ಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಮಂಡಲ್ ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ರಾಜ್ಯ ಅಂಚೆ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿರುವ ಇವರು ತಾವು ತೆಗೆದುಕೊಂಡ ಪ್ರತಿ ಡೋಸ್‌ನ ವಿವರಗಳ ಪಟ್ಟಿಯನ್ನು ಹೊಂದಿದ್ದಾರೆ. ಅವರ ಪಟ್ಟಿಯಲ್ಲಿನ ಮಾಹಿತಿಯಂತೆ ಸೆಪ್ಟೆಂಬರ್‌ ತಿಂಗಳಲ್ಲಿಯೇ ಮೂರು ಡೋಸ್‌ಗಳನ್ನು ತೆಗೆದುಕೊಂಡಿದ್ದಾರೆ.

ವೃದ್ಧರ ಆಘಾತಕಾರಿ ಹೇಳಿಕೆಯ ಬಳಿಕ ಎಚ್ಚೆತ್ತಿರುವ ಜಿಲ್ಲಾ ಅಧಿಕಾರಿಗಳು ಕ್ರಮ ಕೈಗೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಿವಿಲ್ ಸರ್ಜನ್ ಅಮರೇಂದ್ರ ಪ್ರತಾಪ್ ಸಾಹಿ, ’ಮಂಡಲ್ ಅವರು ನಿಜವಾಗಿಯೂ 11 ಡೋಸ್‌ಗಳನ್ನು ಸ್ವೀಕರಿಸಿದ್ದಾರೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ. ಇದು ನಿಜವೆಂದು ಕಂಡುಬಂದರೆ, ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ಆಫ್‌ಲೈನ್ ಶಿಬಿರಗಳಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ಗಳು ನಡೆಯುವಾಗ ಇಂತಹ ಘಟನೆಗಳಿಗೆ ಕಾರಣವಾಗಬಹುದು ಎಂದು ಬಿಹಾರದ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಶಿಬಿರಗಳಲ್ಲಿ, ಆಧಾರ್ ಕಾರ್ಡ್ ವಿವರಗಳು ಮತ್ತು ಫೋನ್ ಸಂಖ್ಯೆಗಳನ್ನು ಸಂಗ್ರಹಿಸಿ, ನಂತರ ಡೇಟಾವನ್ನು ಸಿಸ್ಟಂಗೆ ಹಾಕಲಾಗುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...