Homeಕರ್ನಾಟಕಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

- Advertisement -
- Advertisement -

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’’ ಎಂದು ಹೇಳಿದ್ದಾರೆ.

‘‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:‘ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

“ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ” ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್‌ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

“ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...