Homeಕರ್ನಾಟಕಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

- Advertisement -
- Advertisement -

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’’ ಎಂದು ಹೇಳಿದ್ದಾರೆ.

‘‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:‘ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

“ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ” ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್‌ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

“ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...