Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...