Homeಕರ್ನಾಟಕಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ: ವೈವಿದ್ಯಮಯ ಗೆಡ್ಡೆ, ಗೆಣಸು ಮಾರಾಟ- ಲಕ್ಷಾಂತರ ರೂ ವಹಿವಾಟು

- Advertisement -
- Advertisement -

ಕಾಡಿನಿಂದ ಆವೃತವಾಗಿರುವ ಉತ್ತರ ಕನ್ನಡದ ಇಡೀ ಜೋಯಿಡಾ ತಾಲ್ಲೂಕಿನಲ್ಲಿ ವೈವಿದ್ಯಮಯ ಗೆಡ್ಡೆ-ಗೆಣಸು ಅನಾದಿ ಕಾಲದಿಂದ ಬೆಳೆಯಲಾಗುತ್ತಿದೆ. ಇಲ್ಲಿಯ ಬುಡಕಟ್ಟು ಕುಣಬಿ ಜನಾಂಗದವರು ಸಾಂಪ್ರದಾಯಿಕವಾಗಿ ಗೆಡ್ಡೆ, ಗೆಣಸು ಬೆಳೆಯುತ್ತಿದ್ದಾರೆ. ಇದು ಕುಣಬಿಗಳ ಮೂಲ ಕಸುಬು. ಕೃಷಿ ವಿಜ್ಞಾನಿಗಳು ಜೋಯಿಡಾ ಭಾಗದ ಗೆಡ್ಡೆ-ಗೆಣಸು ಪರಿಶೀಲಿಸಿ ಇವುಗಳು ಚಿಕ್ಕ ಮಕ್ಕಳ ಆರೋಗ್ಯಕರ ಆಹಾರ ತಯಾರಿಕೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ವರ್ಷದಿಂದ ಜೋಯಿಡಾದಲ್ಲಿ ಗೆಡ್ಡೆ-ಗೆಣಸು ಮೇಳ ನಡೆಸಲಾಗುತ್ತಿದ್ದು, ಬುಧವಾರ ಈ ಬಾರಿಯ ಮೇಳವನ್ನು ಕುಣಬಿ ಅಭಿವೃದ್ಧಿ ಸಂಘ ಮತ್ತು ಕಾಳಿ ರೈತ ಉತ್ಪದಕರ ಸಂಘ ಆಯೋಜಿಸಿತ್ತು.

230ಕ್ಕೂ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ತಾವು ಬೆಳೆದ ನಾನಾ ನಮೂನೆಯ ಗೆಡ್ಡೆ, ಗೆಣಸುಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು. ಗೆಡ್ಡೆಗಳ ವಿವಿಧ ಬಗೆಯ ಖಾದ್ಯ ಮಾರಾಟವೂ ಇತ್ತು. ಸಣ್ಣ-ಪುಟ್ಟ ಗಾತ್ರದಿಂದ ಬೃಹದಾಕಾರದ ಗೆಡ್ಡೆ, ಗೆಣಸುಗಳು ಗೋವಾ, ಮಹಾರಾಷ್ಟ್ರ, ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಿಂದ ಮೇಳಕ್ಕೆ ಬಂದವರನ್ನು ಚಕಿತಗೋಳಿಸಿದವು. ಜೋಯಿಡಾದ ಸುಮಾರು 50 ಎಕರೆ ಪ್ರದೇಶದಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷದ ಗೆಡ್ಡೆ ಮೇಳದಲ್ಲಿ ಮೂರರಿಂದ ಮೂರುವರೆ ಲಕ್ಷದ ವ್ಯಾಪಾರವಾಗಿದೆ ಎನ್ನಲಾಗಿದೆ.

ಮೇಳ ಉದ್ಘಾಟಿಸಿದ ಕಾಳಿ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಮಾರಿಯೋ ಕ್ರಿಸ್ತರಾಜ ಮಾತನಾಡಿ, “ಜೋಯಿಡಾದ ಹಳ್ಳಿಗಾಡಿನ ಜನರು ಅದರಲ್ಲೂ ಕುಣಬಿ ಸಮುದಾಯದವರು ಗೆಡ್ಡೆ-ಗೆಣಸು ಬೆಳೆದು ಪ್ರಸಿದ್ದರಾಗಿದ್ದಾರೆ. ಹಲವಾರು ತಲೆಮಾರಿನಿಂದ ಬಂದಿರುವ ಈ ಕೃಷಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಪೂರ್ವಜರು ಬೆಳೆಸಿ ಉಳಿಸಿದ ಗೆಡ್ಡೆ, ಗೆಣಸು ತಳಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಈ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು.

ಎಲ್ಲ ರಂಗದಲ್ಲಿ ತೀರಾ ಹಿಂದುಳಿದಿರುವ ಜೋಯಿಡಾ ತಾಲೂಕು ಗೆಡ್ಡೆ, ಗೆಣಸು ಮೇಳದಿಂದ ಹೊರ ಪ್ರಪಂಚದಲ್ಲಿ ಗುರುತಿಸಿಕೊಂಡಿದೆ. ದಟ್ಟ ಅಡವಿಯಲ್ಲಿ ಬೆಳೆಯುವ ಗೆಡ್ಡೆ-ಗೆಣಸನ್ನು ಕುಣಬಿ ಬುಡಕಟ್ಟಿನ ಸಮುದಾಯ ಅಡುಗೆ ಮನೆಗೆ ಪರಿಚಯಿಸಿದೆ. ಗೆಡ್ಡೆ-ಗೆಣಸು ಮೇಳದ ಹಿಂದಿನ ಶಕ್ತಿ ಸಹ ಕುಣಬಿ ಜನಾಂಗವೇ ಆಗಿದೆ. ಕೆಸುವಿನ ಗೆಡ್ಡೆ, ಸುವರ್ಣಗೆಡ್ಡೆ, ಕೆಂಪು ಗೆಣಸು, ಅರಿಶಿಣ, ಶುಂಠಿ, ಮಾವಿನ ಶುಂಠಿ, ಆನೆ ಪಾದದಂತೆ ಇರುವ ಬೃಹತ್ ಗಾತ್ರದ ಚರಣ ಮತ್ತಿತರ ಗೆಡ್ಡೆಗಳು ಮೇಳದಲ್ಲಿತ್ತು.

ಡೇರಿಯಾ, ಡಿಗ್ಗಿ, ಬಜಾರಕುಣಂಗ, ನಿಗುಂಡಿ, ತೇರಾಳಿ, ನುಜ್ಜಿ, ಕುಂಡಲ, ಬಾಡಪೋಲಿ, ದುಮಾಳ, ಕರಂಜೋಯಿಡಾ, ಅಣಶಿ, ಕುಂಬಾರವಾಡ, ಕುವೇಶಿ ಮುಂತಾದ ಹಳ್ಳಿಗಳ ಪ್ರತಿಯೊಂದು ಕುಣಬಿ ಮನೆ ಹಿತ್ತಲಲ್ಲಿ ಗೆಡ್ಡೆ-ಗೆಣಸು ಬೆಳೆಯಲಾಗುತ್ತದೆ. ಕಣಬಿಗಳ ಆಡು ಭಾಷೆಯಲ್ಲಿ ಗೆಣಸಿಗೆ ಕೋನ್ ಎಂದರೆ ಕೆಸುವಿನ ಗೆಡ್ಡೆಗೆ ಮುಡ್ಲಿ ಎನ್ನುತ್ತಾರೆ.

ದಾವಾ ಮುಡ್ಲಿ, ಚೇಡ್ವಾಲಿ ಮುಡ್ಲಿ, ರಕ್ಯಾಮುಡ್ಲಿ, ಕುಣಬಿಮುಡ್ಲಿ, ಕಾಳಿ ಮುಡ್ಲಿ, ಪುಲಾ ಮುಡ್ಲಿ, ಗಿಡ್ಡಿ ಮುಡ್ಲಿ, ಲಾಂಬಟ ಮುಡ್ಲಿ, ಹುಂಡು, ಕಾಳೊ ತೆರೊ, ದುರತಾಳಿ, ಆಳೆಕೋನ್, ಧಯೆಕೋನ್, ತಾಂಬ್ಡೆ ಕೋನ್, ದುಕರ್ ಕೋನ್, ನಾಗರ್ ಕೋನ್, ಮಾಂಡೆ ಕೋನ್, ಆಳೆ ಕೋನ್, ಚೇನಿ ಕೋನ್, ಕಾಟೆ ಕಣಗಾ, ಝಾಡ ಕಣಗಾ, ತಾರೋಟಿ ಕಣಗಾ ಮುಂತಾದ ಹೆಸರಿನ ಗೆಡ್ಡೆ-ಗೆಣಸು ಜೋಯಿಡಾ ಪ್ರದೇಶದಲ್ಲಿ ವಿಪುಲವಾಗಿ ಬೆಳೆಯಲಾಗುತ್ತದೆ. ಜೋಯಿಡಾ ಮತ್ತು ಹತ್ತಿರದ ರಾಮನಗರ ಈ ಗೆಡ್ಡೆ-ಗೆಣಸುಗಳ ಪ್ರಮುಖ ಮಾರುಕಟ್ಟೆ.


ಇದನ್ನೂ ಓದಿ: ಮೂರ್ತಿ ಭಂಜನೆ ಎಂಬ ರಾಜಕೀಯ ಇತಿಹಾಸದ ಪಳೆಯುಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...