Homeಕರ್ನಾಟಕ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

- Advertisement -
- Advertisement -

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಡೆಯುವ ಜಾತೀಯತೆ ಮತ್ತು ರಾಜಕೀಯದ ಸುತ್ತ ನಡೆಯುವ ಘಟನೆಗಳನ್ನು ‘ಧೀರ ಭಗತ್ ರಾಯ್‌’ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಕನ್ನಡ ಚಿತ್ರರಂಗದ ಹೊಸ ನಿರ್ದೇಶಕ ಕರ್ಣನ್ ಎ.ಎಸ್.

ಚಿತ್ರರಂಗದಲ್ಲಿ ಎಂಟು ವರ್ಷದ ಅನುಭವವಿರುವ ನೆಲಮಂಗಲದ ಕರ್ಣನ್, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮತ್ತು ಪಾ. ರಂಚಿತ್ ಅವರೇ ನನಗೆ ಇಂತಹ ಸಿನಿಮಾ ಮಾಡಲು ಸ್ಪೂರ್ತಿ. ಎನ್ನುವ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಮನಮುಟ್ಟುವಂತೆ ತೋರಿಸಬಹುದು ಎನ್ನುತ್ತಾರೆ.

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ಣನ್, “ನರಗುಂದ ಎಂಬ ಕಾಲ್ಪನಿಕ ಹಳ್ಳಿಯೊಂದರಲ್ಲಿ sc ಮೀಸಲಾತಿ ಕ್ಷೇತ್ರದಲ್ಲಿ ನಡೆಯುವ ಜಾತಿ, ರಾಜಕೀಯದ ಸುತ್ತ ನಡೆಯುವ ಕತೆಯಿದು. 1975, 85, 97, 2004 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಒಂದು ಗ್ಯಾಂಗ್ ಸ್ಟಾರ್‌, ಪೊಲಿಟಿಕಲ್ ಸಿನಿಮಾವನ್ನು ನಾನ್ ಲೀನಿಯರ್‌ ಆಗಿ ಪರಿಚಯಿಸುತ್ತಿದ್ದೇವೆ. ತುಂಬಾ ರಿಸರ್ಚ್ ಮಾಡಿ, ಪ್ಲ್ಯಾನ್ ಮಾಡಿ ಚಿತ್ರದ ತಯಾರಿ ಮಾಡಿದ್ದೇವೆ” ಎಂದಿದ್ದಾರೆ.

“ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ ಕರ್ಣನ್.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಮುಂದುವರಿದು, ಸಿನಿಮಾಗೆ ‘ಧೀರ ಭಗತ್ ರಾಯ್‌’ ಎಂಬ ಹೆಸರು ಇಡಲು ಮುಖ್ಯ ಕಾರಣವಿದೆ ಎಂದಿದ್ದಾರೆ. ಚಿತ್ರದಲ್ಲಿ ಈ ಹೇಸರು ಹೇಗೆ ರಾಜಕೀಯ ಅಜೆಂಡಾವಾಗಿ ಕೆಲಸ ಮಾಡುತ್ತದೆ ಎಂದುದನ್ನು ಚಿತ್ರ ನೋಡಿ ಎನ್ನುತ್ತಾರೆ ನಿರ್ದೇಶಕ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಆಳುವ ವರ್ಗದಲ್ಲಿರಬೇಕು. ಅಧಿಕಾರದಿಂದ ವಂಚಿತರಿಗೆ ರಾಜಕೀಯ ಶಕ್ತಿ ದೊರಕಬೇಕು’ ಎಂದಿದ್ದಾರೆ.

ಕಾಲ್ಪನಿಕ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಸೇರಸಿ ಕಥೆ ಬರೆದಿದ್ದಾರೆ ನಿರ್ದೇಶಕ. ಕಮರ್ಷಿಲ್‌ ಆಗಿ ಈ ಚಿತ್ರವನ್ನು ತಯಾರು ಮಾಡಿದ್ದೇವೆ. ಮಾಸ್ ಪ್ರೇಕ್ಷಕರಿಗೆ ಯಾವುದೇ ಬೇಸರವಾಗುವುದಿಲ್ಲ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರ ನಿರ್ದೇಶನವಿದೆ ಎಂದು ಭರವಸೆ ನೀಡಿದ್ದಾರೆ.

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಜ.15 ಕ್ಕೆ ಟ್ರೈಲರ್‌ ಬಿಡುಗಡೆಯಾಗಲಿದ್ದು, ನಂತರ ತೆಲುಗು, ತಮಿಳು ಭಾಷೆಗೂ ಚಿತ್ರ ತರುವ ಯೋಜನೆಯಿದೆ. ಮಾರ್ಚ್‌ಗೆ ಸಿನಿಮಾ ಚಿತ್ರಮಂದಿರಗಳಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...