Homeಕರ್ನಾಟಕ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

- Advertisement -
- Advertisement -

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನಡೆಯುವ ಜಾತೀಯತೆ ಮತ್ತು ರಾಜಕೀಯದ ಸುತ್ತ ನಡೆಯುವ ಘಟನೆಗಳನ್ನು ‘ಧೀರ ಭಗತ್ ರಾಯ್‌’ ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಕನ್ನಡ ಚಿತ್ರರಂಗದ ಹೊಸ ನಿರ್ದೇಶಕ ಕರ್ಣನ್ ಎ.ಎಸ್.

ಚಿತ್ರರಂಗದಲ್ಲಿ ಎಂಟು ವರ್ಷದ ಅನುಭವವಿರುವ ನೆಲಮಂಗಲದ ಕರ್ಣನ್, ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮತ್ತು ಪಾ. ರಂಚಿತ್ ಅವರೇ ನನಗೆ ಇಂತಹ ಸಿನಿಮಾ ಮಾಡಲು ಸ್ಪೂರ್ತಿ. ಎನ್ನುವ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಜನರಿಗೆ ಮನಮುಟ್ಟುವಂತೆ ತೋರಿಸಬಹುದು ಎನ್ನುತ್ತಾರೆ.

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ಣನ್, “ನರಗುಂದ ಎಂಬ ಕಾಲ್ಪನಿಕ ಹಳ್ಳಿಯೊಂದರಲ್ಲಿ sc ಮೀಸಲಾತಿ ಕ್ಷೇತ್ರದಲ್ಲಿ ನಡೆಯುವ ಜಾತಿ, ರಾಜಕೀಯದ ಸುತ್ತ ನಡೆಯುವ ಕತೆಯಿದು. 1975, 85, 97, 2004 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಒಂದು ಗ್ಯಾಂಗ್ ಸ್ಟಾರ್‌, ಪೊಲಿಟಿಕಲ್ ಸಿನಿಮಾವನ್ನು ನಾನ್ ಲೀನಿಯರ್‌ ಆಗಿ ಪರಿಚಯಿಸುತ್ತಿದ್ದೇವೆ. ತುಂಬಾ ರಿಸರ್ಚ್ ಮಾಡಿ, ಪ್ಲ್ಯಾನ್ ಮಾಡಿ ಚಿತ್ರದ ತಯಾರಿ ಮಾಡಿದ್ದೇವೆ” ಎಂದಿದ್ದಾರೆ.

“ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ ಕರ್ಣನ್.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಮುಂದುವರಿದು, ಸಿನಿಮಾಗೆ ‘ಧೀರ ಭಗತ್ ರಾಯ್‌’ ಎಂಬ ಹೆಸರು ಇಡಲು ಮುಖ್ಯ ಕಾರಣವಿದೆ ಎಂದಿದ್ದಾರೆ. ಚಿತ್ರದಲ್ಲಿ ಈ ಹೇಸರು ಹೇಗೆ ರಾಜಕೀಯ ಅಜೆಂಡಾವಾಗಿ ಕೆಲಸ ಮಾಡುತ್ತದೆ ಎಂದುದನ್ನು ಚಿತ್ರ ನೋಡಿ ಎನ್ನುತ್ತಾರೆ ನಿರ್ದೇಶಕ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಆಳುವ ವರ್ಗದಲ್ಲಿರಬೇಕು. ಅಧಿಕಾರದಿಂದ ವಂಚಿತರಿಗೆ ರಾಜಕೀಯ ಶಕ್ತಿ ದೊರಕಬೇಕು’ ಎಂದಿದ್ದಾರೆ.

ಕಾಲ್ಪನಿಕ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಸೇರಸಿ ಕಥೆ ಬರೆದಿದ್ದಾರೆ ನಿರ್ದೇಶಕ. ಕಮರ್ಷಿಲ್‌ ಆಗಿ ಈ ಚಿತ್ರವನ್ನು ತಯಾರು ಮಾಡಿದ್ದೇವೆ. ಮಾಸ್ ಪ್ರೇಕ್ಷಕರಿಗೆ ಯಾವುದೇ ಬೇಸರವಾಗುವುದಿಲ್ಲ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರ ನಿರ್ದೇಶನವಿದೆ ಎಂದು ಭರವಸೆ ನೀಡಿದ್ದಾರೆ.

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಜ.15 ಕ್ಕೆ ಟ್ರೈಲರ್‌ ಬಿಡುಗಡೆಯಾಗಲಿದ್ದು, ನಂತರ ತೆಲುಗು, ತಮಿಳು ಭಾಷೆಗೂ ಚಿತ್ರ ತರುವ ಯೋಜನೆಯಿದೆ. ಮಾರ್ಚ್‌ಗೆ ಸಿನಿಮಾ ಚಿತ್ರಮಂದಿರಗಳಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...