Homeಮುಖಪುಟಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

- Advertisement -
- Advertisement -

ಬುಧವಾರದಂದು ಪ್ರಧಾನಿ ಮೋದಿ ಪಂಜಾಬ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಉಂಟಾದ ಭದ್ರತಾ ಲೋಪದ ಪ್ರಕರಣವನ್ನು ಸುಪ್ರೀಂಕೋರ್ಟ್‌ ಇಂದು(ಶುಕ್ರವಾರ) ವಿಚಾರಣೆ ನಡೆಸಲಿದೆ. ಆದರೆ ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿವಾದದ ಬಗ್ಗೆ ಆಡಳಿತರೂಢ ಬಿಜೆಪಿಯ ಸಚಿವರು ಮತ್ತು ನಾಯಕರ ಹೇಳಿಕೆಗಳ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು, ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿದ್ದವು.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

ಇದೀಗ ಅದೇ ಘಟನೆಯ ಸ್ಪಷ್ಟ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೊವನ್ನು ಪ್ರಧಾನಿಯ ಕಾರು ನಿಂತಿದ್ದ ಫ್ಲೈಓವರ್‌ನಲ್ಲೇ ಶೂಟ್ ಮಾಡಲಾಗಿದೆ.

ವಿಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ಘೋಷಣೆ ಕೂಗುತ್ತಿದ್ದಾರೆ. ಜನರು ಹಿಡಿದಿರುವ ಧ್ವಜವು ಬಿಜೆಪಿಯದ್ದಾಗಿದ್ದು, ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿದ್ದಾರೆ.

ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ. ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ. ಜೊತೆಗೆ ಘೋಷಣೆ ಕೂಗುತ್ತಿರುವ ವ್ಯಕ್ತಿಗಳ ಮುಖವೂ ಸ್ಪಷ್ಟವಾಗಿದೆ. ಆದರೆ ಯಾರೊಬ್ಬರೂ ಅವರನ್ನು ಚದುರಿಸುವುದಾಗಲಿ, ದೂರ ಕಳಿಸುವುದಾಗಲಿ ಮಾಡುತ್ತಿಲ್ಲ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಪ್ರಧಾನಿ ಮೋದಿ ಈ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ನಿಂತು, ನಂತರ ತನ್ನ ಚುನಾವಣಾ ರ್‍ಯಾಲಿಯನ್ನು ರದ್ದುಗೊಳಿಸಿ ವಿಮಾನ ನಿಲ್ದಾಣಕ್ಕೆ ವಾಪಾಸಾಗಿದ್ದಾರೆ. ಈ ವೇಳೆ “ತನ್ನನ್ನು ಜೀವ ಸಹಿತ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಕ್ಕೆ ಪಂಜಾಬ್‌ ಸಿಎಂಗೆ ಧನ್ಯವಾದ ತಿಳಿಸಿ” ಎಂದು ಅಧಿಕಾರಿಗಳೊಂದಿಗೆ ಹೇಳಿದ್ದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಈ ಹೇಳಿಕೆಯಲ್ಲಿ ಅವರು, ತನ್ನ ಜೀವಕ್ಕೆ ಅಪಾಯ ಇತ್ತು ಎಂದು ಸಂದೇಶ ಹರಡಿದ್ದರು. ಅವರ ಹೇಳಿಕೆಯ ಹಿನ್ನಲೆಯಲ್ಲೇ ಕೇಂದ್ರ ಮಂತ್ರಿ ಸೃತಿ ಇರಾನಿ ಅವರು ಪ್ರಧಾನಿಯನ್ನು ಕೊಲ್ಲಲು ಸಂಚು ಹೂಡಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಇದೀಗ ಹೊಸದಾಗಿ ಬಂದ ವಿಡಿಯೊದಲ್ಲಿ ಫ್ಲೈಓವರ್‌ ಮೇಲೆ ಇದ್ದ ಜನರು ಯಾರು ಎಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಹೋರಾಟದ ಸುದ್ದಿಗಳನ್ನು ನೀಡುತ್ತಿದ್ದ ಟ್ವಿಟರ್‌ ಖಾತೆ ಟ್ರಾಕ್ಟರ್‌ ಟು ಟ್ವಿಟರ್‌‌, “ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಂದ ಮತ್ತು ಅವರ ಪರವಾಗಿ ನಿಂತ ಕೆಲವೇ ಜನರಿಂದ ತಪ್ಪಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದು, ಪಂಜಾಬ್‌ಅನ್ನು ಕೆಟ್ಟದಾಗಿ ಬಿಂಬಿಸುವುದನ್ನು ನಿಲ್ಲಿಸಿ ಎಂದು ಹೇಳಿದೆ. ಜೊತೆಗೆ ವೈರಲ್‌ ವಿಡಿಯೋವನ್ನು ಕೂಡಾ ಅದು ಟ್ವಿಟರ್‌ಗೆ ಅಪ್‌ಲೋಡ್ ಮಾಡಿದೆ.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಬಿಜೆಪಿ ಮತ್ತು ಒಕ್ಕೂಟ ಸರ್ಕಾರವು ಭದ್ರತಾ ಲೋಪ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಮೇಲೆ ಮುಗಿಬಿದ್ದಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಚನ್ನಿ ಅವರು, “ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ. ಆದರೆ ಪ್ರಧಾನಿ ಮೋದಿ ಅವರು ರಸ್ತೆ ಮೂಲಕ ತೆರಳಲಿದ್ದಾರೆ ಎಂದು ನಿಗದಿಯಾಗಿರಲಿಲ್ಲ. ಪ್ರಧಾನಿ ಮೋದಿ ಜೀವಕ್ಕೆ ಯಾವುದೆ ಬೆದರಿಕೆ ಇಲ್ಲ. ಒಬ್ಬ ಪಂಜಾಬಿಯಾಗಿ ಅವರ ಜೀವವನ್ನು ರಕ್ಷಿಸಲು ನಾನು ಜೀವ ಪಣಕ್ಕಿಡಲೂ ಸಿದ್ದ” ಎಂದು ಹೇಳಿದ್ದರು.

ಹೊಸ ವೈರಲ್ ವಿಡಿಯೊವನ್ನು ಹಲವಾರು ಜನರು ಹಂಚಿ ಕೊಂಡಿದ್ದು, ಅಲ್ಲಿಗೆ ಬಿಜೆಪಿ ಕಾರ್ಯಕರ್ತರು ಹೇಗೆ ಬಂದರು? ಇದು ಭದ್ರತಾ ಲೋಪವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ತನ್ನ ಚುನಾವಣ ಭಾಷಣಕ್ಕೆ ವಾಯು ಮಾರ್ಗದ ಮೂಲಕ ತೆರಳುವುದು ಎಂದು ಮೊದಲಿಗೆ ನಿಗದಿಯಾಗಿತ್ತು. ಆದರೆ ಹವಾಮಾನ ವೈಪರೀತ್ಯದ ಕಾರಣ ನೀಡಿ, ಎರಡು ಗಂಟೆಗಳ 111 ಕಿ.ಮಿ. ರಸ್ತೆ ಮಾರ್ಗವನ್ನು ಅನಿರೀಕ್ಷಿತವಾಗಿ ಆಯ್ಕೆ ಮಾಡಲಾಗಿತ್ತು. ಹೀಗೆ ಆಕಸ್ಮಿಕವಾಗಿ ರಸ್ತೆ ಬದಲಾಗಿದ್ದು ಬಿಜೆಪಿ ಕಾರ್ಯಕರ್ತರಿಗೆ ಹೇಗೆ ತಿಳಿಯಿತು ಎಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗಿದೆ. ಅಷ್ಟೇ ಅಲ್ಲದೆ, ಫ್ಲೈಓವರ್‌ನಲ್ಲಿದ್ದ ಬಿಜೆಪಿ ಕಾರ್ಯಕರ್ತರು ಧ್ವಜದೊಂದಿಗೆ ಅಲ್ಲಿಗೆ ತಯಾರಾಗಿಯೇ ಬಂದಿದ್ದರು ಎಂದು ಅವರ ವೇಷಭೂಷಣಗಳನ್ನು ನೋಡಿದರೆ ತಿಳಿಯುತ್ತದೆ, ಹಾಗಾದರೆ ಅವರಿಗೆ ಅಲ್ಲಿ ಪ್ರಧಾನಿ ತಲುಪುತ್ತಾರೆ ಎಂದು ಹೇಗೆ ತಿಳಿಯಿತು ಎಂದು ಕೂಡಾ ಪ್ರಶ್ನಿಸಲಾಗಿದೆ.

ಇದನ್ನೂ ಓದಿ:ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಈ ಮಧ್ಯೆ, 2018ರಲ್ಲಿ ಬಿಜೆಪಿ ತನ್ನ ಅಧೀಕೃತ ಖಾತೆಯಲ್ಲಿ ಹಂಚಿರುವ ವಿಡಿಯೊವನ್ನು ಪಂಜಾಬ್ ಕಾಂಗ್ರಸ್‌ ಇಂದು ಹಂಚಿಕೊಂಡಿದ್ದು, “ನರೇಂದ್ರ ಮೋದಿ ಅವರ ಈ ನಡೆ ಏನು ಹೇಳುತ್ತದೆ? ಪಂಜಾಬ್‌ನಲ್ಲಿರುವಾಗ ನೀವು ನಿಮ್ಮ ಅಡ್ಡದಾರಿ ದುಸ್ಸಾಹಸಗಳನ್ನು ‘ಭದ್ರತಾ ಲೋಪ’ ಎಂದು ಕರೆಯುತ್ತೀರಿ. ಬಿಜೆಪಿ ಸರ್ಕಾರ ಇರುವ ಬೇರೆ ಕಡೆ ಇದನ್ನು ಶ್ರಮದಾನ ಎಂದು ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿ:ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...