Homeಚಳವಳಿಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

- Advertisement -
- Advertisement -

ವೈದ್ಯಕೀಯ ಜಾಮೀನಿನ ಮೇಲಿರುವ ಕವಿ ಹೋರಾಟಗಾರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ವರವರ ರಾವ್ ಅವರ ಜಾಮೀನು ಅವಧಿಯನ್ನು ಶುಕ್ರವಾರ ಫೆಬ್ರವರಿ 5 ರವರೆಗೆ ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.

ಕಳೆದ ವರ್ಷ ಫೆಬ್ರವರಿ 22 ರಂದು  ಬಾಂಬೆ ಹೈಕೋರ್ಟ್ಎಂಟು ತಿಂಗಳ ಕಾಲ ವೈದ್ಯಕೀಯ ಜಾಮೀನು ಮಂಜೂರು ಮಾಡಿತ್ತು. ಬಳಿಕ ಅದನ್ನು 2022ರ ಜನವರಿ 7 ರವರೆಗೆ ವಿಸ್ತರಿಸಲು ಅನುಮತಿ ನೀಡಲಾಗಿತ್ತು.

ಶುಕ್ರವಾರ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂಧೆ ಮತ್ತು ಎನ್.ಆರ್ ಬೋರ್ಕರ್ ಅವರ ವಿಭಾಗೀಯ ಪೀಠ, ಒಂದು ವಾರದವರೆಗೆ ಮಾತ್ರ ಜಾಮೀನು ವಿಸ್ತರಿಬೇಕು ಎಂಬ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

“ಮೂರನೇ ಅಲೆಯು 50 ರಿಂದ 60 ದಿನಗಳವರೆಗೆ ಇರಬಲ್ಲದು ಎಂದು ತಜ್ಞರು ಹೇಳುತ್ತಾರೆ. ಫ್ರಂಟ್ ಲೈನ್ ವರ್ಕರ್ಸ್ ಮತ್ತು ಪೊಲೀಸ್ ಸಿಬ್ಬಂದಿ ಕೋವಿಡ್‌ ಸೊಂಕಿಗೆ ಒಳಗಾಗುತ್ತಿದ್ದಾರೆ. ಅಂಕಿಅಂಶಗಳು ಮೊದಲ ಅಥವಾ ಎರಡನೆಯ ಅಲೆಯಲ್ಲಿ ಇದ್ದಂತೆ ಇಲ್ಲ. ಹೀಗಿರುವಾಗ ಅವರನ್ನು (ವರವರ ರಾವ್) ಜೈಲಿಗೆ ಕಳುಹಿಸಲು ಸಾಧ್ಯವೇ..? ನಮಗೆ ಸ್ವಲ್ಪ ಉಸಿರಾಡಲು ಬಿಡಿ” ಎಂದು ನ್ಯಾಯಮೂರ್ತಿ ಶಿಂಧೆ ಮೌಖಿಕವಾಗಿಯೇ ತನಿಖಾ ಸಂಸ್ಥೆಯನ್ನು ಟೀಕಿಸಿದ್ದಾರೆ.

ನ್ಯಾಯಮೂರ್ತಿಗಳಾದ ಶಿಂಧೆ ಮತ್ತು ಬೋರ್ಕರ್ ಅವರ ಪೀಠವು, ರಾವ್ ಅವರು ಸಲ್ಲಿಸಿದ ಹೊಸ ಅರ್ಜಿಗಳು ಸೇರಿದಂತೆ ಎಲ್ಲಾ ವಿವಾದಗಳನ್ನು ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 4 ರಂದು ಪರಿಗಣಿಸುವುದಾಗಿ ಹೇಳಿದೆ. ಜೊತೆಗೆ ವರವರ ರಾವ್ ಅವರ ಜಾಮೀನನ್ನು ಫೆಬ್ರವರಿ 5 ರವರೆಗೆ ವಿಸ್ತರಿಸಿದೆ.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ಎಲ್ಗರ್ ಪರಿಷತ್ ಸಮಾವೇಶ ನಡೆದಿತ್ತು. ಈ ಸಮಾವೇಶದ ಮರುದಿನ ಪಶ್ಚಿಮ ಮಹಾರಾಷ್ಟ್ರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಭುಗಿಲೆದ್ದಿತ್ತು. ಸಮಾವೇಶದಲ್ಲಿ ಇವರು ಉದ್ರೇಕಕಾರಿ ಭಾಷಣ ಮಾಡಿದ್ದಾರೆ, ಇದರಿಂದಾಗಿ ಹಿಂಸಾಚಾರ ಸಂಭವಿಸಿದೆ ಎಂದು ಆರೋಪಿಸಿ ಅವರನ್ನು ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...